ಮಂಡ್ಯ(Mandya): ಮದ್ದೂರು ತಾಲೂಕಿನ ಹೆಚ್. ಹೊಸೂರು ಗ್ರಾಮದ ರೈತನೋರ್ವ ಬೈಕ್ ನಲ್ಲಿ ಕಬ್ಬಿನ ಗದ್ಧೆಗೆ ತೆರಳುತ್ತಿದ್ದ ವೇಳೆ ಚಿರತೆ ದಾಳಿ ನಡೆಸಿದೆ.
ಈ ವೇಳೆ ರೈತ ಚಿರತೆಯೊಂದಿಗೆ 15 ನಿಮಿಷ ಹೋರಾಡಿ ಪ್ರಾಣ ಉಳಿಸಿಕೊಂಡಿದ್ದಾರೆ. ರೈತ ಜಗದೀಶ್ ಅವರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಹೊಸಹಳ್ಳಿ, ಕೆಂಬೂತನಗೆರೆಯಲ್ಲಿ ಕಳೆದ ಮೂರು ದಿನಗಳಿಂದ ಚಿರತೆ ದಾಳಿ ಮಾಡುತ್ತಿದ್ದು, ಎರಡು ಮೇಕೆಗಳನ್ನು ಚಿರತೆ ಹೊತ್ತೊಯ್ದಿದೆ. ಆದರೆ ಈ ಬಗ್ಗೆ ವಿಷಯ ತಿಳಿಸಿದರೂ ಸಹ ಅರಣ್ಯ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿದ್ದು, ಬೋನ್ ಇರಿಸಿ ಚಿರತೆ ಸೆರೆ ಹಿಡಿಯಬೇಕು ಎಂದು ಆಗ್ರಹಿಸಿದ್ದಾರೆ.