ಮನೆ ರಾಜಕೀಯ ರಾಜ್ಯಸಭಾ ಚುನಾವಣೆ: ಕಾಂಗ್ರೆಸ್ ನ ಎರಡನೇ ಅಭ್ಯರ್ಥಿಯಾಗಿ ಮನ್ಸೂರ್ ಅಲಿ ಖಾನ್

ರಾಜ್ಯಸಭಾ ಚುನಾವಣೆ: ಕಾಂಗ್ರೆಸ್ ನ ಎರಡನೇ ಅಭ್ಯರ್ಥಿಯಾಗಿ ಮನ್ಸೂರ್ ಅಲಿ ಖಾನ್

0

ಬೆಂಗಳೂರು(Bengaluru): ರಾಜ್ಯಸಭೆ ಚುನಾವಣೆ ಘೋಷಣೆಯಾಗಿದ್ದು, ಬಿಜೆಪಿ ಪಕ್ಷ ತಮ್ಮ ಅಭ್ಯರ್ಥಿಗಳನ್ನು ಘೋಷಿಸಿದ ಬೆನ್ನಲ್ಲೇ ಇಂದು ಕಾಂಗ್ರೆಸ್ ತಮ್ಮ ಪಕ್ಷದ ಮತ್ತೋರ್ವ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ.

ಪಕ್ಷದ ಹಿರಿಯ ಮುಖಂಡ ಕೆ. ರೆಹಮಾನ್ ಖಾನ್‌ ಅವರ ಮಗ ಮನ್ಸೂರ್ ಅಲಿ ಖಾನ್ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧರಿಸಿದೆ.

ಎಐಸಿಸಿ ಭಾನುವಾರ ಪ್ರಕಟಿಸಿದ ಪಟ್ಟಿಯಲ್ಲಿ ರಾಜ್ಯದಿಂದ ಜೈರಾಂ ರಮೇಶ್ ಅವರನ್ನು ಮಾತ್ರ ಅಭ್ಯರ್ಥಿಯನ್ನಾಗಿ ಘೋಷಿಸಲಾಗಿತ್ತು. ಎರಡನೇ ಅಭ್ಯರ್ಥಿ ಕಣಕ್ಕಿಳಿಸುವ ತೀರ್ಮಾನ ಕೈಗೊಂಡಿರುವ ಕಾಂಗ್ರೆಸ್ ನಾಯಕರು, ಮನ್ಸೂರ್ ಅವರಿಗೂ ಸೋಮವಾರ ‘ಬಿ’ ಫಾರ್ಮ್ ವಿತರಿಸಿದರು.

ಇದೇ ಸಂದಭರ್ಭದಲ್ಲಿ ಜೈರಾಂ ರಮೇಶ್ ಕೂಡ ಇದೇ ಸಂದರ್ಭದಲ್ಲಿ ಪಕ್ಷದ ‘ಬಿ’ ಫಾರ್ಮ್ ಸ್ವೀಕರಿಸಿದರು.

ಬಿಜೆಪಿಯಿಂದ ಕೇಂದ್ರ ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಚಿತ್ರನಟ ಜಗ್ಗೇಶ್ ಅವರನ್ನು ಕಣಕ್ಕಿಳಿಸಲಾಗುತ್ತಿದೆ.

ಜೆಡಿಎಸ್ ಇನ್ನೂ ಅಭ್ಯರ್ಥಿ ಘೋಷಿಸಿಲ್ಲ. ರಾಜ್ಯಸಭೆ ಮಾಜಿ ಸದಸ್ಯ ಕುಪೇಂದ್ರ ರೆಡ್ಡಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಸಿದ್ಧತೆ ನಡೆಸಿದ್ದಾರೆ.