ಮನೆ ಸ್ಥಳೀಯ ಸಮೃದ್ಧಿ ಕವಿಗೋಷ್ಠಿಯಲ್ಲಿ 29 ಕವಿಗಳ ಕವಿತೆಯ ವಾಚನ

ಸಮೃದ್ಧಿ ಕವಿಗೋಷ್ಠಿಯಲ್ಲಿ 29 ಕವಿಗಳ ಕವಿತೆಯ ವಾಚನ

0

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಕವಿಗೋಷ್ಠಿಯ ಪಂಚ ಕಾವ್ಯೋತ್ಸವದಲ್ಲಿ ದೇವರಾಜ ಹುಣಸಿಕಟ್ಟಿ ಅವರು ‘ಬೆಳಕನ್ನು ಮಾರಲು ಬಂದವನು ಎಂಬ ಕಾವ್ಯ ವಚನ, ಮಲ್ಲಿಕಾರ್ಜುನ ಅಮ್ಟೆ ಅವರು ಯುದ್ಧ ಏನನ್ನು ಸಾಧಿಸಲಾರದು ಎಂಬ ಕಾವ್ಯ ವಾಚನ, ರಜಿಯಾ ಡಿ.ಬಿ ಅವರು ಹೇಗೆ ಕರೆ ತರಲಿ ಎಂಬ ಕಾವ್ಯ ವಾಚನ, ರವಿಕುಮಾರ್ ಕಟ್ಟಿಮನೆ ಎಂ ಎಸ್ ಅವರು ಸಂಶೋಧನೆ ಎಂಬ ಕಾವ್ಯ ವಾಚನವನ್ನು, ಡಾ. ರಾಮಲಿಂಗೇಶ್ವರ ಅವರು ಕಾಲ ಸಮುದ್ರದ ಪ್ರಳಯ ಎಂಬ ಕಾವ್ಯ ವಾಚನಗಳಿಗೆ ಕವಿಪ್ರಿಯರು ಹಾಗೂ ನೆರೆದಿರುವ ಪ್ರೇಕ್ಷಕರು ದಾಸೋಹರಾದರು.

Join Our Whatsapp Group

ಇಂದು ನಾಡಹಬ್ಬ ಮೈಸೂರು ದಸರಾ ಅಂಗವಾಗಿ ಜಗನ್ಮೋಹನ ಅರಮನೆಯಲ್ಲಿ ನಡೆದ ಸಮೃದ್ಧ ಕವಿಗೋಷ್ಠಿಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷರಾದ ಡಾ. ಎಚ್.ಎಲ್ ಪುಷ್ಪ ಅವರು ಮಾತನಾಡಿ, ಪ್ರಖ್ಯಾತ ನಾಡಹಬ್ಬ ಮೈಸೂರು ದಸರಾಗೆ ತನ್ನದೇ ಆದ ಸಾಂಸ್ಕೃತಿಕ ಹಾಗೂ ಸಾಹಿತ್ಯಿಕ ಹಿನ್ನಲೆ ಇರುವಂಥದ್ದು ಇಂಥ ಕವಿಗೋಷ್ಠಿಗೆ 125 ಜನ ಕವಿಗಳಿಗೆ ಆಹ್ವಾನ ಸಿಕ್ಕಿದೆ. ಕವಿತೆ ಕೇಂದ್ರಬಿoದು, ಜೇಡ ತನ್ನ ಬಲೆಯನ್ನು ನೇಯುವ ಹಾಗೆ ಒಂದು ವಸ್ತುವನ್ನು ನೋಡಿ ಕವಿಯು ಕವಿತೆಯನ್ನು ನೇಯುತ್ತಾನೆ.

ಇಂತಹ ಕಾರ್ಯಕ್ರಮವು ಸಹಜವಾಗಿ ಸರ್ಕಾರದ ಆಯೋಜನೆಯಾಗಿದೆ. ಸಾಮಾಜಿಕ ನ್ಯಾಯದ ಅಡಿಯಲ್ಲಿ ಕೆಲವೊಂದು ಬಾರಿ ಕೆಲವು ಅವಕಾಶ ಸಿಗದೇ ಇರುವುದು ಸಹಜ ಎಂದರು. ಪಂಪನ ಕಾಲದ ಸಾಹಿತ್ಯದಿಂದ ಆಧುನಿಕ ಸಾಹಿತ್ಯದ ವರೆಗೂ ವಿವರಿಸುತ್ತಾ ವಿಶೇಷವಾಗಿ ದಲಿತ ಕಾವ್ಯ, ಸಮಾಜವನ್ನು ಪ್ರಶ್ನಿಸುವಂಥ ಕಾವ್ಯಗಳು ಹಾಗೂ ಸಾರ್ವಕಾಲಿಕ ಕಾವ್ಯಗಳ ಬಗ್ಗೆ ವಿವರಿಸುತ್ತಾ ಇವು ನಮ್ಮ ದೈನಂದಿನ ಜೀವನದ ಮೇಲೆ ಹೇಗೆ ಪ್ರಭಾವ ಬೀರುತ್ತದೆ ಎಂಬುದನ್ನು ವಿವರಿಸಿದರು.

ಕವಿತೆಯನ್ನು ಓದುವಂತೆ ಮಾಡಿ ಅದನ್ನು ನಾವುಗಳು ಆಲಿಸಿಕೊಳ್ಳುವುದು ಒಂದು ರೀತಿಯ ಸೊಬಗು, ಅನೇಕ ವೃದ್ಧಾಶ್ರಮ, ಜೈಲು ಖೈದಿಗಳ ಕವಿತೆಗಳ ವಾಚನವನ್ನು ನೋಡಿದ್ದೇವೆ. ಕವಿತೆಗಳು ದಾರಿತಪ್ಪಿದ ರಾಜಪ್ರಭುತ್ವಗಳು ಹಾಗೂ ಪ್ರಭುತ್ವಗಳನ್ನು ಪ್ರಶ್ನಿಸಲಿವೆ ಎಂಬುದು ನಾವು ಕಂಡಿದ್ದೇವೆ. ಲಿಖಿತ ಸಂವಿಧಾನದ ಮೂಲಕ ಕಾವ್ಯಗಳನ್ನು ಕಟ್ಟುತ್ತಾ ಬಂದಿದೆ. ಕಾವ್ಯ ನಮ್ಮ ಬದುಕನ್ನು ಹೇಗೆ ರೂಪಿಸುತ್ತೆ ಎಂಬುದನ್ನು ನಾವು ಕಾಣಬಹುದಾಗಿದೆ ಎಂದು ತಿಳಿಸಿದರು.

ರಗಳೆಗಳ ಕವಿ ರನ್ನ 9 ನೇ ಕವಿರಾಜ ಮಾರ್ಗ ಕೃತಿಗಳು ನಾಡಿನ ಹೆಮ್ಮೆ ಹಾಗೂ ಸೌಹಾರ್ದತೆ ಸಾಕ್ಷಿಯಾಗಿದೆ. ಇನ್ನು ಕುವೆಂಪುರವರ ‘ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು’ ಕಾವ್ಯ, ಒಂದು ದೇಶ ಒಂದು ಜನ ಒಂದು ಜಾತಿ ಒಂದು ಎಂಬ ಸಂದೇಶದ ಕಾವ್ಯಗಳು, ವಿಶೇಷವಾಗಿ ದಲಿತ ಕಾವ್ಯ, ಲೈಂಗಿಕ ಕಾವ್ಯಗಳು ಕವಿತೆಗಳು ನೈಜ್ಯ ಹಾಗೂ ಪ್ರಾಮಾಣಿಕತೆ ರೂಪವಾಗಿದೆ. ಸಿದ್ಧಲಿಂಗಯ್ಯ ರವರ, ಯಾರಿಗೆ ಬಂತು, ಎಲ್ಲಿಗೆ ಬಂತು ಸ್ವಾತಂತ್ರ್ಯ, ಹೋರಾಟದ ಕವಿತೆ, ನಮ್ಮ ಎಲುಬಿನ ಅಂದದೊಳಗೆ ಮಂದಿರ ಮಸೀದಿ ಎಂಬ ಸರ್ವಕಾಲಿಕ ಕವಿತೆಗಳು ಧರ್ಮ ಮುಖ್ಯವೋ ಮನುಷತ್ವ ಮುಖ್ಯವೋ ಎಂಬ ಸಂದೇಶದ ಕವಿತೆಗಳನ್ನು ಸ್ಮರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಆಕಾಶವಾಣಿ ಕಾರ್ಯಕ್ರಮ ನಿರ್ವಾಹಕರಾದ ಅಬ್ದುಲ್ ರಶೀದ್ ಅವರು, ಒಂದೇ ವೇದಿಕೆಯಲ್ಲಿ ಎಲ್ಲಾ ರೀತಿಯ ಕವಿಗಳನ್ನು ಸೇರಿಸಿ ಕವಿತೆ ವಾಚನಗೊಳಿಸಿದ್ದು ನಿಜಕ್ಕೂ ಕವಿಗೋಷ್ಠಿ ವೇದಿಕೆಗೆ ಹೆಚ್ಚು ಮೆರಗು ತಂದಿದೆ. ಕವಿತೆಗಳು ಯಾವುದೇ ರೀತಿಯ ಗೊಂದಲಕ್ಕೆ ಒಳಗಾಗದೆ ಕೇಳುಗರಿಗೆ ಹಿತ ಎನಿಸುವಂತೆ ಸಮೃದ್ದ ಕವಿಗೋಷ್ಠಿ ಯಶಸ್ವಿಗೊಂಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ಕವಿತೆ ವಾಚನ ಮಾಡಿದ ಎಲ್ಲಾ ಕವಿ ಹಾಗೂ ಕವಯತ್ರಿಯರಿಗೆ ಸನ್ಮಾನ ಹಾಗೂ ಕಿರು ಕಾಣಿಕೆಯನ್ನು ನೀಡಿ ಗೌರವಿಸಲಾಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಪ್ರೊ. ಕವಿತಾ ರೈ ಅವರು ಮಾತನಾಡಿ, ಬೇಡನೊಬ್ಬ ರಾಮಾಯಣ ರಚಿಸಿದ, ಬೆಸ್ತನೊಬ್ಬ ಮಹಾಭಾರತವನ್ನು ರಚಿಸಿದ ಹೀಗೆ ಅವರು ಕಟ್ಟಿದ ಕಾವ್ಯಗಳ ಹಾದಿಯಲ್ಲಿ ನಾವು ಇಂದು ಸಾಗಿದ್ದೇವೆ. ಹಲವಾರು ಕವಿ ಹಾಗೂ ಕವಯತ್ರಿಯರ ಕಾವ್ಯಗಳ ಧ್ವನಿಯು ಒಂದು ಅಸ್ವಸ್ಥ ಹಾಗೂ ಅನಾರೋಗ್ಯ ಸಮಾಜದ ಉಳಿಗಾಲವಾಗಿದೆ.

ಕಾವ್ಯಗಳಲ್ಲಿ ಹಲವಾರು ಸಮುದಾಯಗಳ ಪ್ರಾತಿನಿಧ್ಯವನ್ನು ಕಾಣಬಹುದು. ವರ್ತಮಾನದಲ್ಲಿ ಕವಿತೆಗಳ ವಿಚಾರಧಾರೆಯು ಬಹಳ ಮುಖ್ಯವಾದದ್ದು, ನಾನು ಅನೇಕ ಕವಿಗಳನ್ನು ಓದುಕೊಂಡು ಅವರನ್ನು ಅನುಸರಿಸಿಕೊಂಡಿದ್ದೇನೆ ಎಂದು ಸಂತಸ ವ್ಯಕ್ತಪಡಿಸಿದರು.

ಈ ದೇಶದಲ್ಲಿ ಮುನುವಾದ, ಮೂಲಭೂತವಾದದ ಪರಿಕಲ್ಪನೆಗಳಿಗೆ ಸಾಹಿತಿಗಳ ಮೂಲಕ ಸಾರ್ಥಕತೆ ಸಿಕ್ಕಿದೆ ಆ ವಿಚಾರದಲ್ಲಿ ಇನ್ನಷ್ಟು ಸಾಹಿತಿಗಳು ಬರಬೇಕೆಂದು ಆಶಿಸಿದರು. ಇದೇ ಸಂದರ್ಭದಲ್ಲಿ 78 ರ ಹರೆಯದ ದೇಶದಲ್ಲಿ ನಮಗೊಂದು ಆಧಾರ ಸಿಕ್ಕಿದೆ ಎಂಬ ಕವಿತೆ ವಾಚನವನ್ನು ಪ್ರಸ್ತುತ ಪಡಿಸಿದರು.

ಕವಿಗೋಷ್ಠಿಯಲ್ಲಿ ಕೆ.ಆರ್ ಕ್ಷೇತ್ರದ ಶಾಸಕರಾದ ಟಿ.ಎಸ್ ಶ್ರೀವತ್ಸ ಅವರು ಮಾತನಾಡಿ, ದಸರಾದ ವಿವಿಧತೆಯಲ್ಲಿ ಒಂದಾದ ಕವಿಗೋಷ್ಠಿಯು ತನ್ನದೇ ಆದ ಪ್ರಾಮುಖ್ಯತೆ ಮತ್ತು ವೈಶಿಷ್ಟ್ಯತೆಯನ್ನು ಒಳಗೊಂಡಿದೆ. ನಾನು ನಿಮ್ಮಲ್ಲಿ ಒಬ್ಬನಾಗಿ ಕವಿತೆ ಕೇಳಲು ಬಂದಿದ್ದೇನೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಕೆ.ಎಂ ಗಾಯತ್ರಿ, ಡಿ.ಸಿ.ಪಿ.ಮುತ್ತುರಾಜ್, ದಸರಾ ಕವಿಗೋಷ್ಠಿ ಉಪ ಸಮಿತಿಯ ಕಾರ್ಯಾಧ್ಯಕ್ಷರಾದ ಎನ್.ಕೆ.ಲೋಲಾಕ್ಷಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ವಿ.ಎನ್ ಮಲ್ಲಿಕಾರ್ಜುನಸ್ವಾಮಿ ಹಾಗೂ ಕವಿಗೋಷ್ಠಿ ಸಮಿತಿಯ ಸದಸ್ಯರುಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.