ಮನೆ ಅಪರಾಧ ಚಿತ್ತಾಪುರ-ಕರದಳ್ಳಿ ರಸ್ತೆ ಮಧ್ಯದಲ್ಲಿರುವ ಸೈಯದ್ ಪೀರ್ ದರ್ಗಾ ಧ್ವಂಸ

ಚಿತ್ತಾಪುರ-ಕರದಳ್ಳಿ ರಸ್ತೆ ಮಧ್ಯದಲ್ಲಿರುವ ಸೈಯದ್ ಪೀರ್ ದರ್ಗಾ ಧ್ವಂಸ

0

ಚಿತ್ತಾಪುರ: ಪಟ್ಟಣದ ಹೊರವಲಯದಲ್ಲಿರುವ ಚಿತ್ತಾಪುರ-ಕರದಳ್ಳಿ ರಸ್ತೆ ಮಧ್ಯದಲ್ಲಿರುವ ಸೈಯದ್ ಪೀರ್ ದರ್ಗಾವನ್ನು ಕೆಲ ಕಿಡಿಗೇಡಿಗಳು ಅ.9ರ ಬುಧವಾರ ರಾತ್ರಿ ಧ್ವಂಸಗೊಳಿಸಿರುವ ಘಟನೆ ನಡೆದಿದೆ.

Join Our Whatsapp Group

ದರ್ಗಾದ ಗೇಟ್ ನ ಬೀಗ ಮುರಿದು ಸುತ್ತ ಕಟ್ಟಿದ ಕಟ್ಟೆ ಮತ್ತು ದರ್ಗಾದ ಮೇಲೆ ಸ್ಥಾಪಿಸಿದ ಗೋಪುರವನ್ನು ಧ್ವಂಸಗೊಳಿದ್ದಾರೆ ಎಂದು ತಿಳಿದು ಬಂದಿದೆ.

ಹಿಂದೂ-ಮುಸ್ಲಿಂ ಭಾವೈಕ್ಯತೆ ಹೊಂದಿರುವ ಸೈಯದ್ ಪೀರ್ ದರ್ಗಾವನ್ನು ಧ್ವಂಸಗೊಳಿಸಿರುವುದು ಸಾರ್ವಜನಿಕ ವಲಯದಲ್ಲಿ ತೀರ್ವ ಚರ್ಚೆಗೆ ಗ್ರಾಸವಾಗಿ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಈ ರೀತಿ ದರ್ಗಾವನ್ನೇ ಗುರಿಯಾಗಿಸಿಟ್ಟಿಕೊಂಡು ದರ್ಗಾವನ್ನು ಧ್ವಂಸಗೊಳಿಸಿರುವುದು ಸರಿಯಲ್ಲ. ಈ ಕೃತ್ಯದಲ್ಲಿ ಭಾಗಿಯಾಗಿದ್ದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ದರ್ಗಾದ ಉಸ್ತುವಾರಿ ಸೈಯದ್ ಆಗ್ರಹಿಸಿದರು.

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪಿಎಸ್ಐ ಶ್ರೀಶೈಲ್ ಅಂಬಾಟಿ, ಕ್ರೈಂ ಪಿಎಸ್ಐ ಚಂದ್ರಾಮಪ್ಪ, ಸಿಬ್ಬಂದಿ ಬಸ್ಸು ರೆಡ್ಡಿ, ದತ್ತು ಸೇರಿದಂತೆ ದರ್ಗಾದ ಉಸ್ತುವಾರಿ ಸೈಯದ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೃತ್ಯದ ಕುರಿತು ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ.