ಉಪ್ಪಳ: ಮೀನಿನ ಲಾರಿಯನ್ನು ತಡೆದು ನಿಲ್ಲಿಸಿ ಚಾಲಕನಿಗೆ ಚಾಕು ತೋರಿಸಿ ಬೆದರಿಕೆಯೊಡ್ಡಿ 1.64 ಲಕ್ಷ ರೂ. ದರೋಡೆ ಮಾಡಿದ ಘಟನೆ ಬುಧವಾರ ಮುಂಜಾನೆ ಉಪ್ಪಳ ಅಟ್ಟೆಗೋಳಿಯಲ್ಲಿ ನಡೆದಿದೆ.
ಪೈವಳಿಕೆ ನಿವಾಸಿಯಾದ ಯೂಸಫ್ ಅವರನ್ನು ತಂಡವೊಂದು ತಡೆದು ನಿಲ್ಲಿಸಿ ದರೋಡೆ ಮಾಡಿದ್ದು ಈ ಬಗ್ಗೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಎಂದಿನಂತೆ ಮುಂಜಾನೆ ಮೀನು ತರಲೆಂದು ಮಂಗಳೂರಿಗೆ ತೆರಳುತ್ತಿದ್ದಾಗ ಅಟ್ಟೆಗೋಳಿಗೆ ತಲುಪಿದಾಗ ಬೈಕ್ನಲ್ಲಿ ಬಂದ ಇಬ್ಬರು ಲಾರಿಗೆ ಅಡ್ಡಿಯಿರಿಸಿ, ಯೂಸಫ್ ಅವರಿಗೆ ಚಾಕು ತೋರಿಸಿ ಬೆದರಿಕೆಯೊಡ್ಡಿ ದರೋಡೆ ಮಾಡಲಾಗಿದೆ. ದರೋಡೆ ಬಳಿಕ ಬೈಕ್ನಲ್ಲಿ ಪರಾರಿಯಾಗಿದ್ದಾರೆ. ಪೊಲೀಸರು ವಿವಿದೆಡೆಗಳಲ್ಲಿರುವ ಸಿಸಿ ಕ್ಯಾಮರಾ ದೃಶ್ಯಗಳನ್ನು ಪರಿಶೀಲಿಸುತ್ತಿದ್ದಾರೆ