ಮನೆ ಅಪರಾಧ ರೈತ ಸಂಘದ ಅಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ಚಂದ್ರಶೇಖರ್‌ ವಜಾ

ರೈತ ಸಂಘದ ಅಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ಚಂದ್ರಶೇಖರ್‌ ವಜಾ

0

ಶಿವಮೊಗ್ಗ(Shivamogga): ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ವಜಾಗೊಳಿಸಲಾಗಿದೆ. ನೂತನ ಅಧ್ಯಕ್ಷರಾಗಿ ಎಚ್.ಆರ್.ಬಸವರಾಜಪ್ಪ ಆಯ್ಕೆಯಾಗಿದ್ದಾರೆ.

ಶಿವಮೊಗ್ಗದ ರೈತ ಸಂಘದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕೋಡಿಹಳ್ಳಿ ಚಂದ್ರಶೇಖರ್‌ ಅವರನ್ನು ವಜಾ ಮಾಡಿ ಆ ಸ್ಥಾನಕ್ಕೆ ಎಚ್‌.ಆರ್‌. ಬಸವರಾಜಪ್ಪ ಅವರನ್ನು ನೇಮಕ ಮಾಡಲಾಗಿದೆ.
ಖಾಸಗಿ ಸುದ್ದಿವಾಹಿನಿಯಲ್ಲಿ ಚಂದ್ರಶೇಖರ್‌ ಅವರು ಹಣಕ್ಕೆ ಬೇಡಿಕೆ ಇಟ್ಟ ವಿಡಿಯೋ ಪ್ರಕಟವಾಗಿತ್ತು. ಇದರ ಬಗ್ಗೆ ಸೂಕ್ತ ತನಿಖೆ ಆಗಿ ಸಂತ್ಯಾಂಶ ಹೊರಗೆ ಬರುವವರೆಗೂ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ರೈತ ಸಂಘ ಹೇಳಿತ್ತು. ಆದರೆ ಇದನ್ನು ಚಂದ್ರಶೇಖರ್‌ ಅವರು ಒಪ್ಪದ ಕಾರಣ ರೈತ ಸಂಘವೇ ಸಭೆ ನಡೆಸಿ ವಜಾ ಮಾಡುವ ತೀರ್ಮಾನ ಕೈಗೊಂಡಿದೆ.