ಮನೆ ರಾಜ್ಯ ಸಿದ್ದರಾಮಯ್ಯರನ್ನು ಗೆದ್ದಲು ಹುಳಕ್ಕೆ ಹೋಲಿಸಿದ ಬಿಜೆಪಿ

ಸಿದ್ದರಾಮಯ್ಯರನ್ನು ಗೆದ್ದಲು ಹುಳಕ್ಕೆ ಹೋಲಿಸಿದ ಬಿಜೆಪಿ

0

ಬೆಂಗಳೂರು (Bengaluru)-ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (siddaramaiah) ವಿರುದ್ಧ ಬಿಜೆಪಿ ಮತ್ತೆ ವಾಗ್ದಾಳಿ ನಡೆಸಿದೆ. ಸಿದ್ದರಾಮಯ್ಯ ಅವರನ್ನು ಗೆದ್ದಲು ಹುಳಕ್ಕೆ ಹೋಲಿಸಲಾಗಿದೆ.

ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿ ಟ್ವೀಟ್‌ ಮಾಡಿರುವ, ಗೆದ್ದಲು ಹುಳ ಇಡಿ ಮರವನ್ನೇ ಒಳಗಿನಿಂದ ಕೊರೆದು, ಒಮ್ಮೆಲೇ ಹೆಮ್ಮರವನ್ನು ಬುಡ ಸಮೇತ ಬೀಳಿಸುತ್ತದೆ. ಈ ಕಲೆ ಸಿದ್ದರಾಮಯ್ಯ ಅವರಿಗೆ ಸಿದ್ಧಿಸಿದೆ. ಕನಕಪುರದ ಬಂಡೆಯನ್ನು ಒಳಗಿನಿಂದ ಕೊರೆಯಲಾಗುತ್ತಿದೆ. ಶೀಘ್ರದಲ್ಲೇ ಬಂಡೆ ಟೊಳ್ಳಾಗಿ, ಕುಸಿಯಲಿದೆ, #ಅಸಹಾಯಕಡಿಕೆಶಿ ಮೂಕಪ್ರೇಕ್ಷಕ ಅಷ್ಟೇ! ಎಂದಿದೆ.

ಎರಡನೇ ಅಭ್ಯರ್ಥಿ ಹಾಕದೆ, ತಮ್ಮ ಹೆಚ್ಚುವರಿ ಮತಗಳ ಮೂಲಕ ಜೆಡಿಎಸ್‌ ಅಭ್ಯರ್ಥಿಯನ್ನು ಗೆಲ್ಲಿಸಲು ಡಿಕೆಶಿ ರಣತಂತ್ರ ರೂಪಿಸಿದ್ದರು. ಇದನ್ನರಿತ ಸಿದ್ದರಾಮಯ್ಯ, ಡಿಕೆಶಿ ಆಪ್ತರನ್ನೇ ಎರಡನೇ ಅಭ್ಯರ್ಥಿಯಾಗಿಸಿದರು. #ಅಸಹಾಯಕಡಿಕೆಶಿ ಈಗ, ಜೆಡಿಎಸ್‌ಗೆ ನೀಡಿದ ಮಾತು ಉಳಿಸಿಕೊಳ್ಳುತ್ತಾರೋ ಅಥವಾ ಕಾಂಗ್ರೆಸ್‌ ಅಭ್ಯರ್ಥಿ ಗೆಲ್ಲಿಸಿಕೊಳ್ಳುತ್ತಾರೋ ಎಂದು ಪ್ರಶ್ನಿಸಿದೆ.