ಮನೆ ಕಾನೂನು ಹತ್ತು ವರ್ಷದ ನಂತರ ಒಂದಾದ ದಂಪತಿ

ಹತ್ತು ವರ್ಷದ ನಂತರ ಒಂದಾದ ದಂಪತಿ

0

ಧಾರವಾಡ (Dharwada): ಉಚ್ಚ ನ್ಯಾಯಾಲಯದ ಕಾನೂನು ಸೇವಾ ಸಮಿತಿಯು ಹತ್ತು ವರ್ಷಗಳಿಂದ ದೂರವಾಗಿದ್ದ ದಂಪತಿಗಳನ್ನು ಪರಸ್ಪರ ಒಂದುಗೂಡಿಸಿದೆ.
ಧಾರವಾಡದ ಸುಜಾತಾ ಹಾಗೂ ಶಿವಮೊಗ್ಗದ ದೀಪಕ ದಿನಕರ ದಂಪತಿಗಳು ಭಿನ್ನಾಭಿಪ್ರಾಯಗಳಿಂದ ಪರಸ್ಪರ ಹತ್ತು ವರ್ಷಗಳಿಂದ ದೂರವಾಗಿದ್ದರು. ಪತಿ ದೀಪಕ್ ಅವರು ವಿಚ್ಛೇದನ ಕೋರಿ ಕೌಟುಂಬಿಕ ನ್ಯಾಯಾಲಯದಲ್ಲಿ‌ ಅರ್ಜಿ ಸಲ್ಲಿಸಿದ್ದರು. ನಿರಾ ಎಂಬ 11 ವರ್ಷದ ಹೆಣ್ಣು ಮಗಳಿರುವ ಈ ದಂಪತಿಗಳನ್ನು ನ್ಯಾಯಮೂರ್ತಿಗಳ ಸಲಹೆ ಮೇರೆಗೆ ಮಧ್ಯಸ್ಥಿಕೆಗಾರರ ಎದುರು ಹಾಜರು ಪಡಿಸಲಾಯಿತು. ಉಭಯ ಪಕ್ಷಗಾರರ ಸಂಬಂಧಿಕರು , ಉಭಯ ಪಕ್ಷಗಾರರ ವಕೀಲರಾದ ಎಸ್.ಆರ್.ಹೆಗಡೆ ಮತ್ತು ಗಿರೀಶ ಹಿರೇಮಠ ಹಾಗೂ ಮಧ್ಯಸ್ಥಗಾರರಾದ ಹನುಮಂತರೆಡ್ಡಿ ಸಾವ್ಕಾರ ಅವರ ಹಿತವಚನದ ಮೇರೆಗೆ ಮುಂದಿನ ದಾಂಪತ್ಯ ಜೀವನ, ಭವಿಷ್ಯ ಹಾಗೂ ಮಗಳ ಜೀವನದ ನಿರ್ವಹಣೆಯ ಸದುದ್ದೇಶವನ್ನು ಇಟ್ಟುಕೊಂಡು ರಾಜಿ ಮಾಡಿಕೊಂಡರು. ಒಂದಾದ ದಂಪತಿಗಳನ್ನು ನ್ಯಾಯಧೀಶರಾದ ಕೃಷ್ಣ ಎಸ್. ದೀಕ್ಷಿತ್ ಮತ್ತು ಪಿ.ಕೃಷ್ಣ ಭಟ್ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠದ ಮುಂದೆ ಹಾಜರು ಪಡಿಸಲಾಯಿತು. ನ್ಯಾಯಾಧೀಶರುಗಳು ದಂಪತಿಗಳು ಮತ್ತೆ ಒಂದಾಗಿರುವುದರ ಬಗ್ಗೆ ತಿಳಿದು ಹರ್ಷ ವ್ಯಕ್ತಪಡಿಸಿದರು. ದಂಪತಿಗಳು ಇಂದು ಜೊತೆಯಾಗಿ ಶಿವಮೊಗ್ಗದಲ್ಲಿರುವ ಪತಿಯ ಮನೆಗೆ ತೆರಳಿದರು ಎಂದು ಹೈಕೋರ್ಟ್ ಪೀಠದ ಅಧಿಕ ವಿಲೇಖನಾಧಿಕಾರಿ ವೆಂಕಟೇಶ ಆರ್. ಹುಲಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದಿನ ಲೇಖನಏಕದಿನ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಆಲ್‌ರೌಂಡರ್ ಬೆನ್ ಸ್ಟೋಕ್ಸ್
ಮುಂದಿನ ಲೇಖನದ್ರೌಪದಿ ಮುರ್ಮು ಗೆಲುವು ನಿಶ್ಚಿತ: ಸಿಎಂ ಬಸವರಾಜ ಬೊಮ್ಮಾಯಿ