ಮನೆ ರಾಷ್ಟ್ರೀಯ ಔಷಧ ವ್ಯಾಪಾರಿಯ ಹತ್ಯೆ ಪ್ರಕರಣ: ಎನ್‌ಐಎಯಿಂದ ತನಿಖೆ

ಔಷಧ ವ್ಯಾಪಾರಿಯ ಹತ್ಯೆ ಪ್ರಕರಣ: ಎನ್‌ಐಎಯಿಂದ ತನಿಖೆ

0

ನವದೆಹಲಿ(New Delhi): ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ ಪರ ಸಾಮಾಜಿಕ ಮಾಧ್ಯಮಗಳಲ್ಲಿ ಸಂದೇಶ ಪ್ರಕಟಿಸಿದ್ದ ಆರೋಪದಲ್ಲಿ ಮಹಾರಾಷ್ಟ್ರದ ಅಮರಾವತಿಯಲ್ಲಿ ಔಷಧ ವ್ಯಾಪಾರಿಯನ್ನು ಹತ್ಯೆ ಮಾಡಿರುವ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ (ಎನ್‌ಐಎ) ವಹಿಸಲಾಗಿದೆ ಎಂದು ಕೇಂದ್ರ ಗೃಹ ಕಾರ್ಯಾಲಯ ಟ್ವೀಟ್ ಮೂಲಕ ಮಾಹಿತಿ ನೀಡಿದೆ.

ಜೂನ್ 21ರಂದು ಅಮರಾವತಿಯಲ್ಲಿ ಔಷಧ ವ್ಯಾಪಾರಿ ಉಮೇಶ್ ಪ್ರಹ್ಲಾದ್ ರಾವ್ ಕೊಲ್ಹೆ (54) ಎಂಬುವವರನ್ನು ಹತ್ಯೆ ಮಾಡಲಾಗಿತ್ತು.

ಹತ್ಯೆ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸಲಾಗಿದ್ದು,  ಹತ್ಯೆ ಹಿಂದೆ ಅಂತರರಾಷ್ಟ್ರೀಯ ಸಂಘಟನೆಗಳ ಕೈವಾಡ ಇದೆಯೇ ಎಂಬ ಬಗ್ಗೆಯೂ ತನಿಖೆ ನಡೆಯಲಿದೆ ಎಂದು ಗೃಹ ಸಚಿವರ ಕಾರ್ಯಾಲಯ ತಿಳಿಸಿದೆ.

ಪ್ರಕರಣಕ್ಕೆ ಸಂಬಂಧಿಸಿ ಈವರೆಗೆ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಿಂದಿನ ಲೇಖನಪವಿತ್ರ ಮನಸ್ಸಿನಿಂದ ದಾಂಪತ್ಯಕ್ಕೆ ಕಾಲಿರಿಸಿ
ಮುಂದಿನ ಲೇಖನಹೆಣ್ಣು ಮಕ್ಕಳೊಂದಿಗೆ ಅಸಭ್ಯ ವರ್ತನೆ: ಕೆಲಸದಿಂದ ಶಿಕ್ಷಕ ವಜಾ