ಮನೆ ಅಪರಾಧ ತವರು ಮನೆ ಸೇರಿದ್ದ ಪತ್ನಿಯ ಹತ್ಯೆಗೆ ಯತ್ನಿಸಿದ ಕುಡುಕ ಪತಿ

ತವರು ಮನೆ ಸೇರಿದ್ದ ಪತ್ನಿಯ ಹತ್ಯೆಗೆ ಯತ್ನಿಸಿದ ಕುಡುಕ ಪತಿ

0

ಬಳ್ಳಾರಿ: ಕುಡುಕ ಗಂಡನ ಕಾಟ ತಾಳಲಾರದೇ ತವರು ಮನೆ ಸೇರಿದ್ದ ಪತ್ನಿಯ ಹತ್ಯೆ ಮಾಡಲು ಯತ್ನಿಸಿದ ಪತಿ ಪೊಲೀಸರ ಅತಿಥಿಯಾಗಿದ್ದಾನೆ.

ನೆರೆಯ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪಟ್ಟಣದ ಭೋವಿ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ರಮೇಶ ಪತ್ನಿಯನ್ನು ಕೊಲೆ ಮಾಡಲು ಮುಂದಾಗಿದ್ದ ಪತಿ.

ಹೊಸಪೇಟೆ ಮೂಲದ ರಮೇಶ್ ಕಳೆದ 8 ವರ್ಷಗಳ ಹಿಂದೆ ಹಗರಿಬೊಮ್ಮನಹಳ್ಳಿ ಪಟ್ಟಣದ ಭೋವಿ ಕಾಲೋನಿಯ ಆಶಾ ವನಜಾ ಅವರನ್ನು ಮದುವೆಯಾಗಿದ್ದನು. ಗಂಡ ರಮೇಶನ ಮದ್ಯ ಸೇವನೆ ದಿನೇದಿನೆ ಹೆಚ್ಚಿದ ಹಿನ್ನೆಲೆಯಲ್ಲಿ ಬೇಸತ್ತ ಪತ್ನಿ ಆಶಾ ವನಜಾ, ಗಂಡನ ಜೊತೆ ಸಂಸಾರ ಮಾಡಲು ನಿರಾಕರಿಸಿದ್ದರು. ತವರು ಮನೆಗೆ ಸೇರಿದ್ದರು.

ಒಂದು ವರ್ಷದಿಂದ ಗಂಡನ ಮನೆಗೆ ಬಾರದೆ, ಗಂಡನೊಂದಿಗೆ ಸಂಸಾರ ಮಾಡಲು ಒಲ್ಲೆ ಎಂದ ಪತ್ನಿಯ ಮೇಲೆ ಕುಪಿತಗೊಂಡ ಪತಿ ರಮೇಶ್, ಮಚ್ಚು ಹಿಡಿದು ತವರು ಮನೆಗೆ ಬಂದು ಕೊಲೆಮಾಡಲು ಮುಂದಾಗಿದ್ದಾನೆ. ಈ ವೇಳೆ ಮಧ್ಯೆ ಪ್ರವೇಶಿಸಿದ ಸ್ಥಳೀಯರು, ಮಚ್ಚು ಕಸಿದುಕೊಂಡು ಮಹಿಳೆಯನ್ನು ರಕ್ಷಿಸಿದ್ದಾರೆ. ಗಂಡ ರಮೇಶನನ್ನು ಮಚ್ಚು ಸಮೇತ ಪೊಲೀಸರಿಗೆ ಒಪ್ಪಿಸಿದ್ದಾರೆ.