ಬೆಂಗಳೂರು: ಮರ್ಯಾದೆಗೆ ಹೆದರಿ ತಂದೆಯೇ ಮಗಳನ್ನ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ದೇವನಹಳ್ಳಿ ತಾಲೂಕಿನ ಬಿದಲೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಕವನ ( 20 ) ಮೃತ ಯುವತಿ ಎಂದು ಗುರುತಿಸಲಾಗಿದೆ.
ತಂದೆ ಮಂಜುನಾಥ್ ಎಂಬುವವನು ಮಗಳನ್ನ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾರೆ.
ರಾತ್ರಿ ಮಲಗಿದ್ದ ವೇಳೆ ಮಗಳ ಕತ್ತು ಕೊಯ್ದು, ಕಟ್ಟಿಗೆಯಿಂದ ತಲೆಗೆ ಹೊಡೆದು ಭೀಕರವಾಗಿ ಮಗಳ ಕೊಲೆ ಮಾಡಿದ್ದಾನೆ. ಮಗಳು ಅನ್ಯ ಜಾತಿ ಯುವಕನನ್ನ ಪ್ರೀತಿ ಮಾಡುತ್ತಿದ್ದಾಳೆ ಅಂತ ಮರ್ಯಾದೆಗೆ ಹೆದರಿ ಈ ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ.
ಮಗಳ ಕೊಲೆ ಮಾಡಿ ನಂತರ ಪೊಲೀಸ್ ಠಾಣೆಗೆ ಬಂದ ತಂದೆ ಮಂಜುನಾಥ್ ಶರಣಾಗಿದ್ದಾನೆ. ಸ್ಥಳಕ್ಕೆ ವಿಶ್ವನಾಥಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಳೆದ ಮಂಗಳವಾರವಷ್ಟೇ ಬೆರೊಬ್ಬನ ಜೊತೆ ಪ್ರೀತಿ ಮಾಡಿದ್ದ ಕಿರಿಯ ಮಗಳು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಳು. ಠಾಣೆಯಲ್ಲಿ ಪ್ರೀತಿಸಿದವನ ಜೊತೆ ಹೋಗೋದಾಗಿ ಕಿರಿ ಮಗಳು ಹೇಳಿದ್ದಳು. ಹೀಗಾಗಿ ಪೊಲೀಸರು ಮಂಜುನಾಥ್ ಅವರ ಕಿರಿ ಮಗಳನ್ನು ಸಾಂತ್ವನ ಕೇಂದ್ರಕ್ಕೆ ಕಳುಹಿಸಿ ಕೊಟ್ಟಿದ್ದರು.
ಇದರ ಬೆನ್ನಲ್ಲೇ ಹಿರಿ ಮಗಳು ಸಹ ಪ್ರೀತಿ ಬಲೆಗೆ ಬಿದ್ದಿರುವ ವಿಚಾರ ತಂದೆಗೆ ತಿಳಿದಿದೆ. ಹೀಗಾಗಿ ಇಬ್ಬರ ನಡುವೆ ನಿನ್ನೆ ರಾತ್ರಿ ಜಗಳವಾಗಿದೆಯಂತೆ. ಚಿಕ್ಕ ಮಗಳು ಮರ್ಯಾದೆ ಕಳೆದಳು. ಈಗ ಇವಳು ಮರ್ಯಾದೆ ಕಳೆಯುತ್ತಾಳೆ ಅಂತಾ ರಾತ್ರಿ ಹೊತ್ತು ಮಲಗಿದ್ದ ಮಗಳನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ.
ಸದ್ಯ ಈ ಘಟನೆ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಪೊಲೀಸರು ಮೃತದೇಹವನ್ನು ಮಂಜುನಾಥ್ ಸಂಬಂಧಿಕರಿಗೆ ಹಸ್ತಾಂತರಿಸಲಿದ್ದಾರೆ. ಸದ್ಯ ಪೊಲೀಸ್ ಠಾಣೆಗೆ ಹೋಗಿ ಶರಣಾಗಿರುವ ಆರೋಪಿ ಮಂಜನಾಥ್ ವಿಚಾರಣೆಯನ್ನು ಪೊಲೀಸರು ಕೈಗೊಂಡಿದ್ದಾರೆ.
T20 ವಿಶ್ವಕಪ್ ನಲ್ಲಿ ಕನ್ನಡ ರಾರಾಜಿಸಲಿದೆ.
ಕೆಎಸ್ಆರ್ಟಿಸಿ ಬಸ್ನ ಕಿಟಕಿಯಲ್ಲಿ ಮಹಿಳೆಯ ತಲೆ ಲಾಕ್.
ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ….
ಪ್ರಜ್ವಲ್ ರೇವಣ್ಣ ಬಗ್ಗೆ ನನಗೆ ಏನೂ ಗೊತ್ತಿಲ್ಲ…
ಭ್ರಷ್ಟಾಚಾರದ ಪೆನ್ ಡ್ರೈವ್ ನಿಮಗೆ ಕೊಡುತ್ತೇನೆ ಅದರ ವಿರುದ್ಧ ಕ್ರಮ ತೆಗೆದುಕೊಳ್ಳುವ ತಾಕತ್ತು ಇದೆಯಾ..?
E ಪಾಸ್ ಕಡ್ಡಾಯ
ಆರು ಮರಿಗಳಿಗೆ ಜನ್ಮ ನೀಡಿದ ಚಾರ್ಲಿ
ಚುನಾವಣೆಯಲ್ಲಿ "ಕೈ" ಅಭ್ಯರ್ಥಿಯ ಗಿಫ್ಟ್ ಬಾಕ್ಸ್ ಸೀಜ್
ಗಿಫ್ಟ್ "ಪೊಲಿಟಿಕ್ಸ್"
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.