ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲ್ಲೂಕಿನ ಹೊಸಳ್ಳಿ ಗ್ರಾಮದ ನಿವಾಸಿ ಮಂಜುನಾಥ ಕಾಂಬಳೆ ಅವರು ಮಾರ್ಚ್ 26, 1999 ರಂದು ಐದು ಸಾವಿರ ರೂಪಾಯಿ ಹಣವನ್ನು ಆಗಿನ ಧಾರವಾಡದದೇನಾ ಬ್ಯಾಂಕಿನಲ್ಲಿ ಖಾಯಂ ಠೇವಣಿ ಇಟ್ಟಿದ್ದರು. ಈ ದೇನಾ ಬ್ಯಾಂಕ್ ನಂತರದ ದಿನಗಳಲ್ಲಿ ಬ್ಯಾಂಕ್ ಆಫ್ ಬರೋಡಾದಲ್ಲಿ ವಿಲೀನವಾಗಿತ್ತು. ಠೇವಣಿ ಮೇಲೆ ಶೇ.10.5 ರಂತೆ ಬಡ್ಡಿ ಕೊಡಲು ಒಪ್ಪಂದವಿತ್ತು.
ಮಾರ್ಚ್ 26, 2010 ಕ್ಕೆ ಆ ಠೇವಣಿ ಅವಧಿ ಮುಗಿದಿತ್ತು. ಮುಕ್ತಾಯದ ಮೌಲ್ಯ ರೂ.15,635/- ಆಗಿತ್ತು. ಠೇವಣಿ ಅವಧಿ 2010 ರಲ್ಲೇ ಮುಗಿದರೂ ನಂತರ ಆ ಹಣವನ್ನು ಬ್ಯಾಂಕಿನವರು ಮಂಜುನಾಥ ಅವರಿಗೆ ಕೊಟ್ಟಿರಲಿಲ್ಲ. ಮಂಜುನಾಥ ಹಲವಾರು ಬಾರಿ ಬ್ಯಾಂಕ್ ಆಫ್ ಬರೋಡಾಗೆ ಠೇವಣಿ ಹಣ ಮತ್ತು ಬಡ್ಡಿ ಹಿಂದಿರುಗಿಸಲು ವಿನಂತಿಸಿದರೂ ಏನೂ ಪ್ರಯೋಜನ ಆಗಿರಲಿಲ್ಲ. ಬ್ಯಾಂಕಿನವರ ಈ ವರ್ತನೆಯಿಂದ ಬೇಸತ್ತು ಬ್ಯಾಂಕಿನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರು ಸಲ್ಲಿಸಿದ್ದರು.
ಈ ದೂರಿನ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷ ಈಶಪ್ಪ ಭೂತೆ, ಸದಸ್ಯರಾದ ವಿಶಾಲಾಕ್ಷಿ ಬೋಳಶೆಟ್ಟಿ ಹಾಗೂ ಪ್ರಭು ಹಿರೇಮಠ ಅವರು ಠೇವಣಿ ಅವಧಿ 2010 ರಲ್ಲೇ ಮುಗಿದಿದ್ದು ಈಗ ಸುಮಾರು 13 ವರ್ಷ ಕಳೆದಿದೆ. ಈವರೆಗೆ ಮಂಜುನಾಥ ಅವರಿಗೆ ಠೇವಣಿ ಮುಕ್ತಾಯದ ಹಣ ಮತ್ತು ಅದರ ಮೇಲಿನ ಬಡ್ಡಿಯನ್ನು ಕೊಡದೇ ಇರುವುದು ಗ್ರಾಹಕರ ರಕ್ಷಣಾಕಾಯ್ದೆ ಅಡಿ ಸೇವಾ ನ್ಯೂನ್ಯತೆ ಆಗುತ್ತದೆ ಅಂತಾ ಅಭಿಪ್ರಾಯಪಟ್ಟು ತೀರ್ಪು ನೀಡಿದ್ದಾರೆ.
ಠೇವಣಿ ಹಣ ರೂ.15,635/- ಮತ್ತು ಅದರ ಮೇಲೆ ಇದುವರೆಗಿನ ಬಡ್ಡಿ ರೂ. 22,299/- ಸೇರಿ ಒಟ್ಟು ರೂ. 37,934/- ತೀರ್ಪು ನೀಡಿದ ಒಂದು ತಿಂಗಳ ಒಳಗಾಗಿ ದೂರುದಾರರಿಗೆ ನೀಡುವಂತೆ ಆಯೋಗ ಬ್ಯಾಂಕ್ ಗೆ ಆದೇಶಿಸಿದೆ.
ಈ ಬಗ್ಗೆ ಬ್ಯಾಂಕಿನವರ ನಿರ್ಲಕ್ಷದ ಧೋರಣೆ ಮತ್ತು ಅದರಿಂದ ದೂರುದಾರರಿಗೆ ಆಗಿರುವ ತೊಂದರೆಗಾಗಿ ಬ್ಯಾಂಕಿನವರು ರೂ. 50,000/- ಪರಿಹಾರ ಹಾಗೂ ರೂ.10,000/- ಪ್ರಕರಣದ ಖರ್ಚು ವೆಚ್ಚ ಕೊಡುವಂತೆ ಆದೇಶಿಸಿದೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.