ಹೊಸದಿಲ್ಲಿ(New Delhi): ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಅಧಿಕಾರಾವಧಿ ಆ.೧೦ಕ್ಕೆ ಪೂರ್ಣಗೊಳ್ಳುತ್ತಿದ್ದು, ರಾಜ್ಯಸಭೆಯಲ್ಲಿ ಅವರಿಗೆ ಆತ್ಮೀಯ ಬೀಳ್ಕೊಡುಗೆ ನೀಡಲಾಯಿತು.
ಸದನದ ಒಳಗೆ ಹಾಗೂ ಹೊರಗೆ ಚಮತ್ಕಾರಭರಿತವಾಗಿ, ಸ್ವಾರಸ್ಯಕರ ಒನ್ ಲೈನರ್ಗಳನ್ನು ಭಾಷಣದಲ್ಲಿ ಮೂಡಿಸುತ್ತಿದ್ದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಸದನದಲ್ಲಿ ಪ್ರಧಾನಿ ನರೇಂದ್ರ ಮೋದಿ, ವಿರೋಧಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಅಭಿನಂದಿಸಿದರು.
ಪ್ರಧಾನಿ ನರೇಂದ್ರ ಮೋದಿ ವೆಂಕಯ್ಯ ನಾಯ್ಡು ಅವರ ಚಮತ್ಕಾರಭರಿತ, ಸ್ವಾರಸ್ಯಕರ ಒನ್ ಲೈನರ್ಗಳನ್ನು ನೆನೆದು, ಅವರ ಅವಧಿಯಲ್ಲಿ ಸದನದ ಉತ್ಪಾದಕತೆ ಶೇ.೭೦ಕ್ಕೆ ಏರಿಕೆಯಾಗಿರುವುದನ್ನು ಸ್ಮರಿಸಿದರು.
ರಾಜ್ಯಸಭೆಯಲ್ಲಿ ವಂದನಾರ್ಪಣೆ ಮಾಡಿದ ಪ್ರಧಾನಿ ಮೋದಿ, ನಿರ್ಗಮಿಸುತ್ತಿರುವ ಉಪರಾಷ್ಟ್ರಪತಿಗಳು ಸಂವಾದವನ್ನು ಉತ್ತೇಜಿಸಿದರು, ಅವರು ತಮ್ಮ ಉತ್ತರಾಧಿಕಾರಿಗಳಿಗೆ ಮಾರ್ಗದರ್ಶನ ನೀಡುವಂತಹ ಗುಣಮಟ್ಟ ಮತ್ತು ಪರಂಪರೆಯನ್ನು ಕೊಡುಗೆಯಾಗಿ ನೀಡಿದ್ದಾರೆ ಎಂದು ಹೆಳಿದರು.
ವೆಂಕಯ್ಯ ನಾಯ್ಡು ಅವರೊಂದಿಗೆ ದೀರ್ಘ ಅವಧಿಯಿಂದಲೂ ಕೆಲಸ ಮಾಡಿದ್ದೇನೆ. ಅವರು ವಿವಿಧ ಹುದ್ದೆಗಳನ್ನು ಸಮರ್ಪಣೆಯಿಂದ ನಿರ್ವಹಿಸಿದ್ದನ್ನು ಕಂಡಿದ್ದೇನೆ ಎಂದು ಪ್ರಧಾನಿ ಮೋದಿ ತಮ್ಮ ಹಾಗೂ ವೆಂಕಯ್ಯ ನಾಯ್ಡು ಅವರ ನಡುವಿನ ಒಡನಾಟವನ್ನು ಸ್ಮರಿಸಿದರು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.