ಹಾಸನ: ಸಕಲೇಶಪುರ ತಾಲ್ಲೂಕಿನ ಕಾಡುಮನೆ ಬಳಿ ಗುರುವಾರ ರಣಭಿಕ್ತಿ ರಕ್ಷಿತಾರಣ್ಯದಲ್ಲಿ ಕಾಡ್ಗಿಚ್ಚು ನಂದಿಸಲು ಹೋಗಿ ತೀವ್ರವಾಗಿ ಗಾಯಗೊಂಡಿದ್ದ ಅರಣ್ಯ ಇಲಾಖೆಯ ಗಾರ್ಡ್ ಸುಂದರೇಶ್ ಶನಿವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.
ಫಾರೆಸ್ಟರ್ ಮಂಜುನಾಥ ಹಾಗೂ ಗಾರ್ಡ್ ಸುಂದರೇಶ್ ಅವರನ್ನು ಬೆಂಗಳೂರಿನ ಸೇಂಟ್ ಜಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಶಾಸಕ ಎಚ್.ಕೆ. ಕುಮಾರಸ್ವಾಮಿ ಆಸ್ಪತ್ರೆಗೆ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಿದ್ದರು.
ಕಾಡುಮನೆ ಇಟ್ಟಿಗೆ ಗೂಡು ಪ್ರದೇಶದಲ್ಲಿ ಬೆಂಕಿ ಹತ್ತಿ ಕೊಂಡಾಗ ಅರಣ್ಯ ಇಲಾಖೆ ಅಧಿಕಾರಿಗಳು ಅಲ್ಲಿಗೆ ತೆರಳಿದ್ದರು. ಗಾಳಿಯ ತೀವ್ರತೆಗೆ ಬೆಂಕಿ ಎಲ್ಲೆಡೆ ಆವರಿಸಿದ್ದರಿಂದ ಅರಣ್ಯ ಇಲಾಖೆಯ ನಾಲ್ವರು ಸಿಬ್ಬಂದಿ ಗಾಯಗೊಂಡಿದ್ದರು.
ಶೇ 80 ರಷ್ಟು ಸುಟ್ಟ ಗಾಯಗಳಾಗಿದ್ದ ಸುಂದರೇಶ್ ಅವರ ಸ್ಥಿತಿ ಚಿಂತಾಜನಕವಾಗಿತ್ತು. ಅದಕ್ಕಾಗಿಯೇ ಝೀರೋ ಟ್ರಾಫಿಕ್ನಲ್ಲಿ ಸುಂದರೇಶ್ ಹಾಗೂ ಮಂಜುನಾಥ ಅವರನ್ನು ಬೆಂಗಳೂರಿಗೆ ಆಸ್ಪತ್ರೆಗೆ ರವಾನಿಸಲಾಗಿತ್ತು. ಸುಂದರೇಶ್, ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರಾದ ಸುಂದರೇಶ್ ಅವರ ಮೃತದೇಹಕ್ಕೆ ಹಾಸನದ ಅರಣ್ಯ ಇಲಾಖೆಯಿಂದ ಗೌರವಾರ್ಪಣೆ ಸಲ್ಲಿಸಿದ ಬಳಿಕ ಸ್ವಗ್ರಾಮಕ್ಕೆ ಕಳುಹಿಸಲಾಗುವುದು. ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಕೆ ಸುಧಾಕರ್ ಗೆ ಗಂಡಾಂತರ.
ಕಾಂಗ್ರೆಸ್ ಕಾರ್ಯಕರ್ತರಿಗೆ ಐಟಿ ಕಿರುಕುಳ
ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆ ದ್ವಂಸ
ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.