ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಮೈಸೂರು(Mysuru): ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಹಲವು ಚಿನ್ನದ ಪದಕಗಳನ್ನು ಗಳಿಸಿದ್ದ ವಿದ್ಯಾರ್ಥಿನಿ ಈಗ ಅದೇ ವಿಶ್ವವಿದ್ಯಾಲಯದ ಕುಲಸಚಿವೆ ಹುದ್ದೆಯನ್ನು ಅಲಂಕರಿಸುತ್ತಿದ್ದಾರೆ.
1998ರಲ್ಲಿ ಬಿ.ಎ ಪದವಿ, 1999ರಲ್ಲಿ ಬಿಎಡ್, 2001ರಲ್ಲಿ ಸ್ನಾತಕೋತ್ತರ ಪದವಿಯ ಮೈಸೂರು ವಿವಿ ವಿದ್ಯಾರ್ಥಿಯಾಗಿ ನಾನಾ ವಿಭಾಗಗಳಲ್ಲಿ ಚಿನ್ನದ ಪದಕ ಹಾಗೂ ನಗದು ಬಹುಮಾನಕ್ಕೆ ಭಾಜನರಾಗಿದ್ದ ವಿ.ಆರ್.ಶೈಲಜಾ ಅವರು ಈಗ ತಾವು ಓದಿದ ಅದೇ ವಿಶ್ವವಿದ್ಯಾಲಯದ ಕುಲಸಚಿವೆಯಾಗಿ ನೇಮಕಗೊಂಡಿರುವುದು ಹೆಮ್ಮೆಯ ಸಂಗತಿಯಾಗಿದೆ.
ಪದವಿ ವ್ಯಾಸಂಗದ ವೇಳೆ 9 ಚಿನ್ನದ ಪದಕ ಹಾಗೂ 7 ನಗದು ಪುರಸ್ಕಾರಕ್ಕೆ ಶೈಲಜಾ ಭಾಜನರಾಗಿದ್ದರು.
ಬಿ.ಎಡ್.ನಲ್ಲಿ ವಿವಿಗೆ ಪ್ರಥಮ ರ್ಯಾಂಕ್ ಪಡೆದಿದ್ದರು. ಸ್ನಾತಕೋತ್ತರ ಪದವಿಯಲ್ಲೂ ಪ್ರಥಮ ರ್ಯಾಂಕ್ ಪಡೆದಿದ್ದ ಶೈಲಜಾ ಅವರು 3 ಚಿನ್ನದ ಪದಕ ಹಾಗೂ ಒಂದು ನಗದು ಬಹುಮಾನ ಪಡೆದಿದ್ದರು.
2006ರಲ್ಲಿ ಪ್ರೊಬೇಷನರಿ ಕೆಎಎಸ್ ಅಧಿಕಾರಿಯಾಗಿ ವೃತ್ತಿ ಆರಂಭಿಸಿದ ಶೈಲಜಾ ಅವರು ಮೈಸೂರು ಮಹಾನಗರ ಪಾಲಿಕೆಯ ವಲಯ ಆಯುಕ್ತರಾಗಿಯೂ ಕೆಲಸ ಮಾಡಿದ್ದಾರೆ. ರಾಮನಗರದಲ್ಲಿ ಡಿಯುಡಿಸಿ ವಿಭಾಗದ ಯೋಜನಾ ನಿರ್ದೇಶಕಿಯಾಗಿ, ಕಾವೇರಿ ನೀರಾವರಿ ನಿಗಮದ ಮುಖ್ಯ ಆಡಳಿತಾಧಿಕಾರಿಯಾಗಿಯೂ ಕಾರ್ಯನಿರ್ವಹಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಪಾಂಡವಪುರ ಉಪವಿಭಾಗದ ಹೆಚ್ಚುವರಿ ಆಯುಕ್ತರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ನಂತರ ಮಂಡ್ಯ ಜಿಲ್ಲೆಯ ಎಡಿಸಿಯಾಗಿ ಕಾರ್ಯನಿರ್ವಹಿಸಿದ್ದಾರೆ.