ಮನೆ ಅಪರಾಧ ಅಂತರ ಕಾಯ್ದುಕೊಂಡ ಪ್ರಿಯಕರನಿಗೆ ಚಾಕುವಿನಿಂದ ಇರಿದ ಪ್ರೇಯಸಿ

ಅಂತರ ಕಾಯ್ದುಕೊಂಡ ಪ್ರಿಯಕರನಿಗೆ ಚಾಕುವಿನಿಂದ ಇರಿದ ಪ್ರೇಯಸಿ

0

ಬೆಂಗಳೂರು: ಪ್ರೇಯಸಿಯೇ ಪ್ರಿಯಕರನಿಗೆ ಚಾಕುವಿನಿಂದ ಇರಿದಿರುವ ಘಟನೆ ವಿವೇಕನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಳೆದ ನಾಲ್ಕು ದಿನಗಳ ಹಿಂದೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜಾಂಟಿ ದಾಸ್ ಇರಿತಕ್ಕೊಳಗಾದ ಯುವಕ. ಆರೋಪಿ ಮಹಿಳೆಯನ್ನು ವಿವೇಕನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Join Our Whatsapp Group

ಅಸ್ಸಾಂ ಮೂಲದವರಾದ ಜಾಂಟಿದಾಸ್ ಮತ್ತು ಮಹಿಳೆ ಪರಸ್ಪರ ಪ್ರೀತಿಸುತ್ತಿದ್ದರು. ಆರೋಪಿ ಮಹಿಳೆ ಡೇ ಕೇರ್​​ನಲ್ಲಿ ಆಯಾ ಆಗಿ ಕೆಲಸ ಮಾಡುತ್ತಿದ್ದಳು. ಜಂಟಿ ದಾಸ್ ಸೆಕ್ಯೂರಿಟಿ ಗಾರ್ಡ್ ಆಗಿದ್ದ. ಈ ಮೊದಲೇ ಒಂದು ಮದುವೆಯಾಗಿ ಗಂಡನಿಂದ ಮಹಿಳೆ ದೂರಾಗಿದ್ದಳು. ಆ ಬಳಿಕ ಜಂಟಿ ದಾಸ್ ಪ್ರೀತಿಯಲ್ಲಿ ಬಿದ್ದಿದ್ದಳು. ಇಬ್ಬರೂ ಸಹ ವಿವೇಕನಗರ ಠಾಣಾ ವ್ಯಾಪ್ತಿಯಲ್ಲಿ‌ ವಾಸವಿದ್ದರು. ಪ್ರೇಯಸಿಯ ಬಳಿ ಜಾಂಟಿದಾಸ್ ಸಾಕಷ್ಟು ಹಣ ಪಡೆದುಕೊಂಡಿದ್ದ. ಇತ್ತೀಚಿಗೆ ಆಕೆಯಿಂದ ಅಂತರ ಕಾಯ್ದುಕೊಳ್ಳಲು ಮುಂದಾಗಿದ್ದಾನೆ. ಪ್ರಿಯಕರನ ವರ್ತನೆಯಿಂದ ರೊಚ್ಚಿಗೆದ್ದ ಮಹಿಳೆ ಜಗಳ ತೆಗೆದಿದ್ದಾಳೆ. ಈ ಜಗಳ ಅತಿರೇಕಕ್ಕೆ ಹೋದ ವೇಳೆ ಪ್ರಿಯಕರಿನಿಗೆ ಚಾಕುವಿನಿಂದ ಇರಿದಿದ್ದಾಳೆ.ಪರಾರಿ ಯತ್ನ: “ಪ್ರಿಯಕರನಿಗೆ ಚಾಕು ಇರಿದ ಮಹಿಳೆ ಪರಾರಿಯಾಗಲು ಯತ್ನಿಸಿದ್ದಳು. ಆದರೆ ಆರೋಪಿಯನ್ನು ವಶಕ್ಕೆ ಪಡೆದಿದ್ದೇವೆ. ಘಟನೆಯಲ್ಲಿ ಪ್ರಿಯಕರ ಜಾಂಟಿ ದಾಸ್ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ” ಎಂದು ಪೊಲೀಸರು ತಿಳಿಸಿದ್ದಾರೆ.