ಮನೆ ಅಪರಾಧ ಟೆರೇಸ್‌ ಮೇಲೆ‌ ರಾಷ್ಟ್ರ ಧ್ವಜ ಕಟ್ಟುವಾಗ ಆಯತಪ್ಪಿ ಬಿದ್ದು ವ್ಯಕ್ತಿ ಸಾವು

ಟೆರೇಸ್‌ ಮೇಲೆ‌ ರಾಷ್ಟ್ರ ಧ್ವಜ ಕಟ್ಟುವಾಗ ಆಯತಪ್ಪಿ ಬಿದ್ದು ವ್ಯಕ್ತಿ ಸಾವು

0

ಬೆಂಗಳೂರು(Bengaluru) : 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಮನೆ ಮೇಲೆ ತ್ರಿವರ್ಣ ಧ್ವಜ ಕಟ್ಟುತ್ತಿದ್ದ ವೇಳೆ ​ ಆಯತಪ್ಪಿ ಕೆಳಗೆ ಬಿದ್ದು ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ನಗರದ ಹೆಚ್ ಬಿಆರ್ ಲೇಔಟ್ ನಲ್ಲಿ ನಡೆದಿದೆ.

ಮೃತರನ್ನು ವಿಶುಕುಮಾರ್ (33) ಎಂದು ಗುರುತಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮೂಲದ ವಿಶುಕುಮಾರ್ ವೃತ್ತಿಯಲ್ಲಿ ಸಾಫ್ಟ್​ವೇರ್ ಇಂಜಿನಿಯರ್ ಆಗಿದ್ದರು.

ಭಾನುವಾರ ಮಧ್ಯಾಹ್ನ 1.45 ಸುಮಾರಿಗೆ ತ್ರಿವರ್ಣ ಧ್ವಜ ಕಟ್ಟಲು ಎರಡನೇ ಮಹಡಿಯಲ್ಲಿನ ಮನೆ ಟೆರೇಸ್​ ಮೇಲೆ ಏರಿದ್ದರು. ಈ ವೇಳೆ ಆಯತಪ್ಪಿ 30 ಅಡಿ ಎತ್ತರದಿಂದ ಕೆಳಗೆ ಬಿದ್ದಿದ್ದರು. ಬಿದ್ದ ರಭಸಕ್ಕೆ ವಿಶುಕುಮಾರ್ ತಲೆಗೆ ಗಂಭೀರ ಗಾಯವಾಗಿದೆ. ತಕ್ಷಣ ಅವರನ್ನು ಅಂಬೇಡ್ಕರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ರಾತ್ರಿ ವಿಶುಕುಮಾರ್​ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.ಮೃತರು ಹೆಂಡತಿ ಹಾಗೂ 2 ವರ್ಷದ ಮಗುವನ್ನು ಅಗಲಿದ್ದಾರೆ.

 ಮಗನ ಸಾವಿನ ಸಂಬಂಧ ವಿಶುಕುಮಾರ್ ತಂದೆ ನಾರಾಯಣ ಭಟ್ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಹಿಂದಿನ ಲೇಖನಪ್ರಸಾದ್ ಸ್ಕೂಲ್ ಆಫ್ ರಿಧಮ್ಸ್: ಸಂಗೀತಮಯ ಸ್ವಾತಂತ್ರ್ಯ ದಿನಾಚರಣೆ
ಮುಂದಿನ ಲೇಖನಉದ್ಯಮಿ ಮುಖೇಶ್ ಅಂಬಾನಿ ಕುಟುಂಬಕ್ಕೆ ಜೀವ ಬೆದರಿಕೆ ಕರೆ: ವ್ಯಕ್ತಿ ಬಂಧನ