ದೆಹಲಿ: ಮೂವರು ಅಪ್ರಾಪ್ತ ಬಾಲಕರು ಸೇರಿ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.
ಬಾದರ್ ಪುರ ಪ್ರದೇಶದಲ್ಲಿ ಮೂವರು ಅಪ್ರಾಪ್ತರು ಸೇರಿದಂತೆ ಐವರು ಬಾಲಕರು ವ್ಯಕ್ತಿಯೊಬ್ಬನನ್ನು ಹತ್ಯೆಗೈದಿದ್ದಾರೆ. ಚಾಕುವಿನಿಂದ 25 ಸಲ ಇರಿದ ಬಳಿಕವೂ ಉಸಿರು ನಿಲ್ಲುವವರೆಗೂ ಯುವಕನಿಗೆ ಥಳಿಸಿ ರಸ್ತೆಯ ತುಂಬ ಎಳೆದಾಡಿದ್ದಾರೆ.
ತಕ್ಷಣ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಅವರನ್ನು ಕಂಡ ಆರೋಪಿಗಳು ತಕ್ಷಣ ಅಲ್ಲಿಂದ ಓಡಿಹೋಗಿದ್ದಾರೆ. ಪೊಲೀಸರು ಐವರನ್ನೂ ಬೆನ್ನಟ್ಟಿ ವಶಕ್ಕೆ ಪಡೆದಿದ್ದಾರೆ. ಮೃತರನ್ನು ಗೌರವ್(22) ಎಂದು ಗುರುತಿಸಲಾಗಿದೆ.
ಪೊಲೀಸರ ಪ್ರಕಾರ ರಾತ್ರಿ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮಾಹಿತಿ ಪ್ರಕಾರ ಮೃತ ಗೌರವ್ ಮತ್ತು ಮೂವರು ಆರೋಪಿಗಳು ಪರಸ್ಪರ ಪರಿಚಯವಿದ್ದರು. ಅರ್ಮಾನ್ ಅಲಿಯಾಸ್ ಕುರು ತನ್ನ ಮೂವರು ಅಪ್ರಾಪ್ತ ಸ್ನೇಹಿತರೊಂದಿಗೆ ಗೌರವ್ ನನ್ನು 25 ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಅಪರಾಧ ಎಸಗಿದ ಬಳಿಕ ಮೂವರು ಆರೋಪಿಗಳು ಗೌರವ್ ನ ಮೃತದೇಹವನ್ನು ಗೌರವ್ ಶವವನ್ನು ಸುಮಾರು 60-70 ಮೀಟರ್ ವರೆಗೆ ಎಳೆದೊಯ್ದಿದ್ದಾರೆ. ಈ ವೇಳೆ ರಾತ್ರಿ ಗಸ್ತು ತಿರುಗುತ್ತಿದ್ದ ಕಾನ್ಸ್ ಟೇಬಲ್ ನಟವರ್ ಸಿಂಗ್ ಅದನ್ನು ನೋಡಿದ್ದಾರೆ. ಈ ವೇಳೆ ಕಾನ್ಸ್ ಟೇಬಲ್ ನಟವರ್ ಸಿಂಗ್ ಗೆ ಹೊಡೆದು ಗಾಯಗೊಳಿಸಿದ್ದಾರೆ.
ಇದಾದ ನಂತರ ಬಾದರ್ ಪುರ ಠಾಣೆ ಪ್ರಭಾರಿ ಈಶ್ವರ್ ಸಿಂಗ್, ಹವಾಲ್ದಾರ್ ರಾಜಾರಾಮ್, ಲಕ್ಷ್ಮೀ ನಾರಾಯಣ್, ಕಾನ್ ಸ್ಟೆಬಲ್ ಪವನ್ ಮತ್ತು ರಾಜೀವ್ ಈ ಮೂವರನ್ನು ಬಹಳ ದೂರ ಹಿಂಬಾಲಿಸಿ ಎಲ್ಲರನ್ನೂ ಬಂಧಿಸಿದ್ದಾರೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.