ಮಸ್ಕಿ: ವ್ಯಕ್ತಿಯೊಬ್ಬ ಮತ್ತೊಬ್ಬ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ಘಟನೆ ತಾಲೂಕಿನ ಬಳಗಾನೂರು ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ಮುಂಜಾನೆ(ಏ.23 ರಂದು) ನಡೆದಿದೆ.
ಕೊಲೆಯಾದ ವ್ಯಕ್ತಿಯನ್ನು ಖಾದರಪಾಷ(39) ಎಂದು ಗುರುತಿಸಲಾಗಿದೆ.
ಕೊಲೆಗೈದ ವ್ಯಕ್ತಿ ಮಾರುತಿ ಪೊಲೀಸರಿಗೆ ಶರಣಾಗಿದ್ದಾನೆ. ಕೊಲೆಗೆ ನಿಖರ ಕಾರಣ ಇನ್ನು ತಿಳಿದು ಬಂದಿಲ್ಲ.
ಸಿಂಧನೂರು ಡಿವೈಎಸ್ಪಿ, ಸಿಪಿಐಗಳು ಸ್ಥಳಕ್ಕೆ ಭೇಟಿ ನೀಡಿದ್ದು ಆರೋಪಿಯ ವಿಚಾರಣೆ ನಡೆದಿದೆ.