ಮನೆ ಅಪರಾಧ ಕುಡಿಯುವ ನೀರಿಗೆ ಅಮಲು ಭರಿಸುವ ಔಷಧ ಸೇರಿಸಿ ನರ್ಸ್‌ ಮೇಲೆ ಅತ್ಯಾಚಾರ

ಕುಡಿಯುವ ನೀರಿಗೆ ಅಮಲು ಭರಿಸುವ ಔಷಧ ಸೇರಿಸಿ ನರ್ಸ್‌ ಮೇಲೆ ಅತ್ಯಾಚಾರ

0

ಮುಂಬೈ: ಕೋಲ್ಕತಾದ ಆರ್‌ ಜಿ ಕರ್‌ ಮೆಡಿಕಲ್‌ ಕಾಲೇಜು, ಆಸ್ಪತ್ರೆಯ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಘಟನೆ ಬಗ್ಗೆ ವ್ಯಾಪಕ ಪ್ರತಿಭಟನೆ ನಡೆಯುತ್ತಿದ್ದ ಸಂದರ್ಭದಲ್ಲೇ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯಲ್ಲಿ 19ವರ್ಷದ ಟ್ರೈನಿ ನರ್ಸ್‌ ಮೇಲೆ ಆಟೋ ಚಾಲಕ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ.

Join Our Whatsapp Group

ಪ್ರಾಥಮಿಕ ಮಾಹಿತಿ ಪ್ರಕಾರ, ಟ್ರೈನಿ ನರ್ಸ್‌ ಆಟೋದಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಚಾಲಕ ನೀರು ಬೇಕೆಂದು ಕೇಳಿದ್ದ, ಆಕೆ ನೀರು ಕುಡಿದ ಮೇಲೆ ಪ್ರಜ್ಞೆ ಕಳೆದುಕೊಂಡಿದ್ದಳು. ಆಟೋ ಚಾಲಕ ನೀರಿಗೆ ಮತ್ತು ಬರಿಸುವ ಪದಾರ್ಥ ಸೇರಿಸಿರುವುದಾಗಿ ತಿಳಿಸಿದೆ.

ಪ್ರಜ್ಞೆ ತಪ್ಪಿದ ನರ್ಸ್‌ ಅನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿರುವುದಾಗಿ ವರದಿ ವಿವರಿಸಿದೆ. ಪ್ರಜ್ಞೆ ಬಂದ ನಂತರ ಆಕೆ ಮನೆಯವರಿಗೆ ಮಾಹಿತಿ ನೀಡಿ, ನಂತರ ದೂರು ದಾಖಲಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಎಫ್‌ ಐಆರ್‌ ದಾಖಲಿಸಿಕೊಂಡಿರುವ ಪೊಲೀಸರು ಸಿಸಿಟಿವಿ ಫೂಟೇಜ್‌ ಪರಿಶೀಲಿಸುತ್ತಿದ್ದು, ಆರೋಪಿ ಪತ್ತೆಗೆ ಶೋಧ ಕಾರ್ಯ ನಡೆಸುತ್ತಿರುವುದಾಗಿ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದು, ನರ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ವರದಿ ತಿಳಿಸಿದೆ.

ಘಟನೆಗೆ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿ, ಕಳೆದ ರಾತ್ರಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿ, ಆರೋಪಿಯನ್ನು ತಕ್ಷಣವೇ ಬಂಧಿಸಬೇಕೆಂದು ಒತ್ತಾಯಿಸಿದ್ದಾರೆ.