ಮಧ್ಯಪ್ರದೇಶ ಹೈಕೋರ್ಟ್ ನಲ್ಲಿ ಆರೋಪಿಗಳಿಬ್ಬರಿಗೆ ಜಾಮೀನು ನೀಡಿದ್ದ ನ್ಯಾಯಮೂರ್ತಿಗಳ ಬದಲು ಬೇರೆ ನ್ಯಾಯಮೂರ್ತಿಗಳೆದುರು ಆ ಪ್ರಕರಣ ಪಟ್ಟಿ ಮಾಡಿದ್ದಕ್ಕೆ ಸುಪ್ರೀಂ ಕೋರ್ಟ್ ಇತ್ತೀಚೆಗೆ ಆಕ್ಷೇಪ ವ್ಯಕ್ತಪಡಿಸಿದೆ.
ಸಾಮಾನ್ಯ ಸಂದರ್ಭಗಳಲ್ಲಿ, ಜಾಮೀನು ರದ್ದುಗೊಳಿಸುವ ಮನವಿಯನ್ನು ಜಾಮೀನು ನೀಡಿದ ಅದೇ ನ್ಯಾಯಮೂರ್ತಿಗಳೆದುರು ಪಟ್ಟಿ ಮಾಡಬೇಕಾಗುತ್ತದೆ ಎಂದು ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠ ನುಡಿಯಿತು.
ಆದ್ದರಿಂದ ಹೈಕೋರ್ಟ್ನ ಏಕಸದಸ್ಯ ಪೀಠವೊಂದು ನೀಡಿದ್ದ ಜಾಮೀನನ್ನು ಮತ್ತೊಂದು ಏಕಸದಸ್ಯ ಪೀಠ ರದ್ದುಗೊಳಿಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿತು. ಇಂತಹ ಕ್ರಮ ಸಂಪೂರ್ಣ ಕಾನೂನುಬಾಹಿರ ಮತ್ತು ಅನೌಪಚಾರಿಕತೆಗೆ ಸಮ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಆದ್ದರಿಂದ, ಹೈಕೋರ್ಟ್ನ ಏಕಸದಸ್ಯ ಪೀಠವೊಂದು ನೀಡಿದ ಜಾಮೀನನ್ನು ಮತ್ತೊಂದು ಏಕಸದಸ್ಯ ಪೀಠ ರದ್ದುಪಡಿಸಿದ್ದಕ್ಕೆ ಅದು ಆಕ್ಷೇಪ ವ್ಯಕ್ತಪಡಿಸಿದೆ. ಇಂತಹ ಕೃತ್ಯವು ಸಂಪೂರ್ಣ ಕಾನೂನುಬಾಹಿರ ಮತ್ತು ಅನೌಪಚಾರಿಕತೆಗೆ ಸಮನಾಗಿದೆ ಎಂದು ಅದು ತಿಳಿಸಿದೆ.
“ಜಾಮೀನು ರದ್ದುಗೊಳಿಸುವಂತೆ ಕೋರಿದ ಅರ್ಜಿಯನ್ನು ಮೇಲ್ಮನವಿದಾರರಿಗೆ ಜಾಮೀನು ನೀಡಿದ ಏಕಸದಸ್ಯ ಪೀಠದ ಬದಲಿಗೆ ಬೇರೊಂದು ಏಕಸದಸ್ಯ ಪೀಠದೆದುರು ಹೇಗೆ ಪಟ್ಟಿ ಮಾಡಲಾಯಿತು ಎಂದು ನಮಗೆ ಅರ್ಥವಾಗುತ್ತಿಲ್ಲ… ಹೀಗೆ ಮಾಡುವುದು ಸಂಪೂರ್ಣ ಅನೌಪಚಾರಿಕತೆಗೆ ಸಮ” ಎಂದು ಪೀಠ ನುಡಿದಿದೆ.
ಆದ್ದರಿಂದ, ಆರೋಪಿಗಳ ಜಾಮೀನನ್ನು ರದ್ದುಗೊಳಿಸಿದ ಮಧ್ಯಪ್ರದೇಶ ಹೈಕೋರ್ಟ್ನ ಗ್ವಾಲಿಯರ್ ಪೀಠದ ಏಕಸದಸ್ಯ ನ್ಯಾಯಮೂರ್ತಿ ಆನಂದ್ ಪಾಠಕ್ ಅವರು ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಬದಿಗೆ ಸರಿಸಿತು.
ಜಾಮೀನು ರದ್ದುಗೊಳಿಸಿದ್ದನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್, ಜಾಮೀನು ರದ್ದತಿ ಅರ್ಜಿಯನ್ನು ಪಟ್ಟಿ ಮಾಡಿರುವುದೇ ಅಚ್ಚರಿದಾಯಕವಾಗಿದೆ ಎಂದು ಅದು ಹೇಳಿತು.
ಸಾಮಾನ್ಯ ಸಂದರ್ಭಗಳಲ್ಲಿ, ಜಾಮೀನು ನಿಯಮಗಳ ಉಲ್ಲಂಘನೆಯ ಬದಲು ಅರ್ಹತೆಯ ಆಧಾರದ ಮೇಲೆ ಸಲ್ಲಿಸಲಾದ ಜಾಮೀನು ರದ್ದತಿ ಕೋರಿಕೆ ಅರ್ಜಿಗಳನ್ನು ಆರೋಪಿಗಳಿಗೆ ಜಾಮೀನು ನೀಡಿದ ಅದೇ ಏಕಸದಸ್ಯ ಪೀಠದ ಮುಂದೆ ಇಡಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.
ಈ ಹಿನ್ನೆಲೆಯಲ್ಲಿ ಆರೋಪಿಗಳು ಸಲ್ಲಿಸಿದ್ದ ಮೇಲ್ಮನವಿ ಪುರಸ್ಕರಿಸಿದ ನ್ಯಾಯಾಲಯ ಅವರಿಗೆ ಜಾಮೀನು ರದ್ದುಗೊಳಿಸಿದ್ದ ಹೈಕೋರ್ಟ್ ಆದೇಶವನ್ನು ಬದಿಗೆ ಸರಿಸಿತು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.