ಚಾಮರಾಜನಗರ : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಇಂದು ಅಮಾವಾಸ್ಯೆ ಹಿನ್ನೆಲೆ ಭಕ್ತಸಾಗರವೇ ಹರಿದು ಬಂದಿದೆ.
ರಾಜ್ಯದಲ್ಲಿ ಸಾರ್ವತ್ರಿಕ ಚುನಾವಣೆಯಿದ್ದ ಹಿನ್ನೆಲೆ ಕಳೆದ ಎರಡು ತಿಂಗಳಿನಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿರಲಿಲ್ಲ. ಇದೀಗ ಚುನಾವಣೆ ಮುಗಿದು ಫಲಿತಾಂಶ ಹೊರ ಬಿದ್ದ ಹಿನ್ನೆಲೆ ಕಳೆದ ಎರಡು ದಿನಗಳಿಂದ ಸಾವಿರಾರು ಮಂದಿ ಭಕ್ತರು ಮಾದಪ್ಪನ ಬೆಟ್ಟಕ್ಕೆ ಆಗಮಿಸುತ್ತಿದ್ದಾರೆ.
ನಿರೀಕ್ಷೆಗೂ ಮೀರಿ ಭಕ್ತರು ಆಗಮಿಸಿದ್ದರಿಂದ ಪ್ರಾಧಿಕಾರದ ಸಿಬ್ಬಂದಿಗಳು ಹಾಗೂ ಪೊಲೀಸರು ಭಕ್ತರನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ. ಇನ್ನು ಅಮಾವಾಸ್ಯೆ ಅಂಗವಾಗಿ ದೇಗುಲ ಗರ್ಭಗುಡಿ ಸೇರಿದಂತೆ ಸುತ್ತಮುತ್ತಲ ಆವರಣವನ್ನು ತಳಿರು ತೋರಣಗಳಿಂದ ಸಿಂಗರಿಸಿದ್ದು, ದೇವರಿಗೆ ಬೆಳಗ್ಗೆಯಿಂದಲೇ ಅಭಿಷೇಕ, ಬಿಲ್ವಾರ್ಚನೆ ನೆರವೇರಿಸಿದ್ದಾರೆ.
ಹುಲಿವಾಹನ, ರುದ್ರಾಕ್ಷಿ ವಾಹನ ಹಾಗೂ ಬಸವ ವಾಹನ ಸೇವೆ ಮಾಡುತ್ತಿರುವ ಭಕ್ತರು ಬಿರು ಬಿಸಿಲಿನಲ್ಲೂ ಉತ್ಸಾಹದಿಂದ ಉತ್ಸವದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ಉತ್ಸವದ ವೇಳೆ ಹರಕೆ ಹೊತ್ತ ಜನರು ದವಸ ಧಾನ್ಯ ಸೇರಿದಂತೆ ಇನ್ನಿತರ ವಸ್ತುಗಳನ್ನು ಎಸೆಯುವುದರ ಮೂಲಕ ದಂಡಿನ ಕೋಲನ್ನು ಹೊತ್ತು ಪ್ರಾರ್ಥಿಸುವುದು ಸಾಮಾನ್ಯ ದೃಶ್ಯವಾಗಿತ್ತು.
ಮತ್ತೊದೆಡೆ ಹರಕೆ ಹೊತ್ತವರು ಮುಡಿಸೇವೆ, ಉರುಳು ಸೇವೆ, ಪಂಜಿನ ಸೇವೆ ಹಾಗೂ ರಜಾ ಒಡೆಯುವ ಸೇವೆಯನ್ನು ಕೈಗೊಳ್ಳುವುದರ ಮೂಲಕ ತಮ್ಮ ಹರಕೆಯನ್ನು ತೀರಿಸಿದರು. ಬೆಟ್ಟಗೆ ಬರುವ ಭಕ್ತರಿಗೆ ಪ್ರಾಧಿಕಾರದ ವತಿಯಿಂದ ಸಕಲ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.
ಶಾಲೆಗೆ ಕುಡಿದು ಬರುತ್ತಿದ್ದ ಶಿಕ್ಷಕ ; ಚಪ್ಪಲಿ – ಶೂ ಎಸೆದು ಓಡಿಸಿದ ವಿದ್ಯಾರ್ಥಿಗಳು
ಮತದಾರರಿಗೆ ' ಸಿಹಿ ', ಸುದ್ದಿ..
ಮೋದಿ ಅಭಿಮಾನಿಯ ಕೋರಿಕೆ…
ಪ್ರಸ್ತುತ ಪೊಲೀಸ್ ವ್ಯವಸ್ಥೆಯನ್ನು ಅಣುಕಿಸುತ್ತಿರುವ ಕಾಲ್ಪನಿಕ ಸನ್ನಿವೇಶಗಳು..
ಅಭಿಮಾನಿ ದೇವರುಗಳ ಜೊತೆ ಜಾಕಿ ಚಲನಚಿತ್ರ ವೀಕ್ಷಿಸಿದ ಅಶ್ವಿನಿ ಪುನೀತ್
ಮೈಸೂರು ಮೆಡಿಕಲ್ ಕಾಲೇಜು ಮತ್ತು ಕೆ ಆರ್ ಆಸ್ಪತ್ರೆಯ ಕರ್ಮಕಾಂಡ
ಕರ್ನಾಟಕದ ಹೆಮ್ಮೆಯ ರತ್ನ ಶ್ರೀಮತಿ ಸುಧಾಮೂರ್ತಿಯವರು ರಾಜ್ಯಸಭಾ ಸದಸ್ಯೆಯಾಗಿ ಪ್ರಮಾಣ ವಚನ ಸ್ವೀಕರಿಸಿದರು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.