ಕಾರವಾರ: ಪ್ರೀತಿಸಿ, ದೈಹಿಕ ಸಂಪರ್ಕ ಬೆಳೆಸಿ ಮದುವೆಯಾಗಲು ನಿರಾಕರಿಸಿದ ಯುವಕನ ಮನೆಮುಂದೆ ಸಂತ್ರಸ್ತ ಯುವತಿ ಧರಣಿ ಕುಳಿತಿರುವ ಘಟನೆ ಮುಂಡಗೋಡ ತಾಲೂಕಿನ ಮೈನಳ್ಳಿಯಲ್ಲಿ ನಡೆದಿದೆ.
ಹಿರೇಕೆರೂರು ತಾಲೂಕಿನ ಕಾಂಡೇಬಾಗೂರ್ ಗ್ರಾಮದ ಗಿರಿಜಾ ಪರಮೇಶ್ ಲಮಾಣಿ (19) ಪ್ರತಿಭಟನೆ ಮಾಡುತ್ತಿರುವ ಯುವತಿ.
ಪ್ರಸಾದ್ ಪ್ರಕಾಶ್ ಕಲಾಲ್ ಬದಂಕರ್ (22) ಮೋಸ ಮಾಡಿದ ಯುವಕ.
ಹಾವೇರಿ ಜಿಲ್ಲೆ ರಾಣೆಬೆನ್ನೂರಿನಲ್ಲಿ ತರಬೇತಿಗೆ ತೆರಳಿದ್ದಾಗ ಇಬ್ಬರ ಪರಿಚಯವಾಗಿದ್ದು, ಸ್ನೇಹ ಪ್ರೀತಿಗೆ ತಿರುಗಿದೆ.
ಇದಲ್ಲದೆ ಇಬ್ಬರೂ ಜೊತೆಯಲ್ಲೇ ಉದ್ಯೋಗಕ್ಕಾಗಿ ಬೆಂಗಳೂರಿಗೆ ತೆರಳಿದ್ದರು. ಬೆಂಗಳೂರಿನಲ್ಲಿ ಒಂದೇ ರೂಂನಲ್ಲಿದ್ದರು. ಆದರೆ ಇದೀಗ ವಿವಾಹವಾಗು ಎಂದಾಗ ನಾನು ಟೈಂ ಪಾಸ್ ಮಾಡಿದ್ದು, ಎಂದು ಹೇಳಿ ಯುವಕ ಕೈಕೊಟ್ಟಿದ್ದಾನೆ.
ಆತನನ್ನು ಹುಡುಕಿಕೊಂಡು ಮುಂಡಗೋಡ ಪೊಲೀಸ್ ಠಾಣೆಗೆ ತೆರಳಿದ್ದ ಗಿರಿಜಾಗೆ ಪೊಲೀಸರು ಬುದ್ಧಿವಾದ ಹೇಳಿ ವಾಪಸ್ ಕಳುಹಿಸಿದ್ದಾರೆ. ಪೊಲೀಸರಿಂದ ಯಾವುದೇ ನ್ಯಾಯ ದೊರೆಯದಿದ್ದಾಗ ಯುವಕನ ಮನೆಯ ಮುಂದೆಯೇ ಯುವತಿ ಧರಣಿ ಕುಳಿತಿದ್ದಾಳೆ.
ಪ್ರಸಾದ್ ಮನೆಯ ಮುಂದೆ ಗಿರಿಜಾ ನಿನ್ನೆಯಿಂದ ಪ್ರತಿಭಟನೆ ನಡೆಸುತ್ತಿದ್ದಾಳೆ.
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
ಮನೆ ಮಾರಾಟಕ್ಕೆಮನೆ ಮಾರಾಟಕ್ಕೆ….
ಅಮೆರಿಕದಲ್ಲೂ ಕೂಡ ಹೆಚ್ಚಾಗುತ್ತಿದ್ದಾರೆ ಭಾರತೀಯರು.
27ರೂ. ಗೆ, 28000 ಸಾವಿರ ದಂಡ.
ಸಿದ್ದರಾಮಯ್ಯ ಅವರಿಗೆ ಫ್ರೀ ಟಿಕೆಟ್ ಹಾರಾ ಅರ್ಪಣೆ…..
ಬಿರುಗಾಳಿಗೆ ಕುಸಿದು ಬಿದ್ದ ಮೊಬೈಲ್ ಟವರ್.
ನಿಜವಾಗಲೂ ಇತ್ತು ವಾಸುಕಿ ಸರ್ಪ….
ರಮ್ಯಾ ಔಟ್, ಐಶ್ವರ್ಯ ಎಂಟ್ರಿ…
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.