ಮನೆ ರಾಜ್ಯ ಪ್ರೀತಿಸಿ ಕೈಕೊಟ್ಟ ಯುವಕನ ಮನೆ ಮುಂದೆ ಸಂತ್ರಸ್ತ ಯುವತಿಯ  ಧರಣಿ

ಪ್ರೀತಿಸಿ ಕೈಕೊಟ್ಟ ಯುವಕನ ಮನೆ ಮುಂದೆ ಸಂತ್ರಸ್ತ ಯುವತಿಯ  ಧರಣಿ

0

ಕಾರವಾರ: ಪ್ರೀತಿಸಿ, ದೈಹಿಕ ಸಂಪರ್ಕ ಬೆಳೆಸಿ ಮದುವೆಯಾಗಲು ನಿರಾಕರಿಸಿದ ಯುವಕನ ಮನೆಮುಂದೆ ಸಂತ್ರಸ್ತ ಯುವತಿ ಧರಣಿ ಕುಳಿತಿರುವ ಘಟನೆ ಮುಂಡಗೋಡ ತಾಲೂಕಿನ ಮೈನಳ್ಳಿಯಲ್ಲಿ ನಡೆದಿದೆ.

Join Our Whatsapp Group

ಹಿರೇಕೆರೂರು ತಾಲೂಕಿನ ಕಾಂಡೇಬಾಗೂರ್ ಗ್ರಾಮದ ಗಿರಿಜಾ ಪರಮೇಶ್ ಲಮಾಣಿ (19) ಪ್ರತಿಭಟನೆ ಮಾಡುತ್ತಿರುವ ಯುವತಿ.

ಪ್ರಸಾದ್ ಪ್ರಕಾಶ್ ಕಲಾಲ್ ಬದಂಕರ್ (22) ಮೋಸ ಮಾಡಿದ ಯುವಕ.

ಹಾವೇರಿ ಜಿಲ್ಲೆ ರಾಣೆಬೆನ್ನೂರಿನಲ್ಲಿ ತರಬೇತಿಗೆ ತೆರಳಿದ್ದಾಗ ಇಬ್ಬರ ಪರಿಚಯವಾಗಿದ್ದು, ಸ್ನೇಹ ಪ್ರೀತಿಗೆ ತಿರುಗಿದೆ.

ಇದಲ್ಲದೆ ಇಬ್ಬರೂ ಜೊತೆಯಲ್ಲೇ ಉದ್ಯೋಗಕ್ಕಾಗಿ ಬೆಂಗಳೂರಿಗೆ ತೆರಳಿದ್ದರು. ಬೆಂಗಳೂರಿನಲ್ಲಿ ಒಂದೇ ರೂಂನಲ್ಲಿದ್ದರು. ಆದರೆ ಇದೀಗ ವಿವಾಹವಾಗು ಎಂದಾಗ ನಾನು ಟೈಂ ಪಾಸ್ ಮಾಡಿದ್ದು, ಎಂದು ಹೇಳಿ ಯುವಕ ಕೈಕೊಟ್ಟಿದ್ದಾನೆ.

ಆತನನ್ನು ಹುಡುಕಿಕೊಂಡು ಮುಂಡಗೋಡ ಪೊಲೀಸ್ ಠಾಣೆಗೆ ತೆರಳಿದ್ದ ಗಿರಿಜಾಗೆ ಪೊಲೀಸರು ಬುದ್ಧಿವಾದ ಹೇಳಿ ವಾಪಸ್ ಕಳುಹಿಸಿದ್ದಾರೆ. ಪೊಲೀಸರಿಂದ ಯಾವುದೇ ನ್ಯಾಯ ದೊರೆಯದಿದ್ದಾಗ ಯುವಕನ ಮನೆಯ ಮುಂದೆಯೇ ಯುವತಿ ಧರಣಿ ಕುಳಿತಿದ್ದಾಳೆ.

ಪ್ರಸಾದ್ ಮನೆಯ ಮುಂದೆ ಗಿರಿಜಾ ನಿನ್ನೆಯಿಂದ ಪ್ರತಿಭಟನೆ ನಡೆಸುತ್ತಿದ್ದಾಳೆ.

ಹಿಂದಿನ ಲೇಖನಮಾಂಸ ಬೇಯಿಸುವ ಹೊಗೆ ಸೇವಿಸುವುದರಿಂದ ಆರ್ಥರೈಟಿಸ್​ ಸಾಧ್ಯತೆ: ಅಮೇರಿಕಾ ಸಂಶೋಧನಾ ವರದಿ
ಮುಂದಿನ ಲೇಖನಪುನೀತ್ ಕೆರೆಹಳ್ಳಿ ಸೇರಿ ಐವರಿಗೆ ಜಾಮೀನು ಮಂಜೂರು ಮಾಡಿದ ಹೈಕೋರ್ಟ್