ನವದೆಹಲಿ: ಮೇ 28 ರಂದು ಹೊಸ ಸಂಸತ್ ಕಟ್ಟಡದ ಉದ್ಘಾಟನೆಯ ಸ್ಮರಣಾರ್ಥವಾಗಿ ಹಣಕಾಸು ಸಚಿವಾಲಯವು ವಿಶೇಷವಾಗಿ 75 ರೂಪಾಯಿ ಮುಖಬೆಲೆಯ ನಾಣ್ಯವನ್ನು ಬಿಡುಗಡೆ ಮಾಡಲಿದೆ.
ಸ್ಮರಣಾರ್ಥ ನಾಣ್ಯವು ದೇಶ 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವುದಕ್ಕೆ ಗೌರವ ಸೂಚಕವಾಗಿದೆ.
ನಾಣ್ಯದ ಒಂದು ಭಾಗದಲ್ಲಿ ಅಶೋಕ ಸ್ತಂಭದ ಸಿಂಹ ಲಾಂಛನ ಇರಲಿದ್ದು, ಅದರ ಕೆಳಗೆ ‘ಸತ್ಯ ಮೇವ ಜಯತೇ‘ ಎಂದು ಬರೆಯಲಾಗಿದೆ. ಎಡಭಾಗದಲ್ಲಿ ದೇವನಾಗರಿ ಲಿಪಿಯಲ್ಲಿ ‘ಭಾರತ್‘ ಎಂದು ಬರೆಯಲಾಗಿದ್ದು, ಬಲಭಾಗದಲ್ಲಿ ‘ಇಂಡಿಯಾ‘ ಎಂದು ಇಂಗ್ಲೀಷ್ ನಲ್ಲಿ ಬರೆಯಲಾಗಿದೆ.
ಇನ್ನೊಂದು ಭಾಗದಲ್ಲಿ ಸಂಸತ್ ಸಂಕೀರ್ಣದ ಚಿತ್ರ ಇದ್ದು, ಮೇಲ್ಭಾಗದಲ್ಲಿ ‘ಸಂಸದ್ ಸಂಕುಲ್‘ ಎಂದು ದೇವನಾಗರಿ ಲಿಪಿಯಲ್ಲೂ, ಕೆಳಭಾಗದಲ್ಲಿ ‘ಪಾರ್ಲಿಮೆಂಟ್ ಕಾಂಪ್ಲೆಕ್ಸ್‘ ಎಂದೂ ಇಂಗ್ಲೀಷ್ ನಲ್ಲಿ ಬರೆಯಲಾಗಿದೆ.
ವೃತ್ತಾಕಾರದಲ್ಲಿರುವ ಈ ನಾಣ್ಯ 44 ಮಿಲಿ ಮೀಟರ್ ವ್ಯಾಸ ಹೊಂದಿರಲಿದೆ. 35 ಗ್ರಾಂ ತೂಕ ಇರಲಿದೆ. ಶೇ 50 ಬೆಳ್ಳಿ, ಶೇ 40 ತಾಮ್ರ, ಶೇ 5 ಬಿಳಿಲೋಹ, ಹಾಗೂ ಶೇ 5 ರಷ್ಟು ಸತು ಬಳಸಿ ಈ ನಾಣ್ಯವನ್ನು ತಯಾರಿಸಲಾಗಿದೆ.
ಮೇ 28ರ ಭಾನುವಾರ ನೂತನ ಸಂಸತ್ ಭವನದ ಉದ್ಘಾಟನೆ ಸಮಾರಂಭ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆಗೊಳಿಸಲಿದ್ದಾರೆ.
ಮನುಷ್ಯನಿಗೆ ಹಣ ಮುಖ್ಯನಾ?…. ಇಲ್ಲ ಗುಣ ಮುಖ್ಯಾನಾ?……
ನಾಡ ದೇವತೆ…. ಶ್ರೀ ಚಾಮುಂಡೇಶ್ವರಿ…🙏🏻
ನಮ್ಮ ರಾಜ್ಯದ ಭವಿಷ್ಯ ಚಿಂತಾ ಜನಕವಾಗಿದೆ ಪುಗಸಟ್ಟೆ ಕೊಡುವ ಅವಾಂತರ
ನಿಮ್ಹಾನ್ಸ್ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಅಪ್ಪ ಬರಿಮಾತಲ್ಲ ಊಹೆಗೂ ನಿಲುಕದ ಆಕಾಶ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.