ಮನೆ ಅಪರಾಧ ಶುಲ್ಕ ಕಟ್ಟದ ಲಾರಿ ತಡೆಯಲು ಹೋಗಿ ಪ್ರಾಣ ಕಳೆದುಕೊಂಡ ಟೋಲ್ ಆಪರೇಟರ್

ಶುಲ್ಕ ಕಟ್ಟದ ಲಾರಿ ತಡೆಯಲು ಹೋಗಿ ಪ್ರಾಣ ಕಳೆದುಕೊಂಡ ಟೋಲ್ ಆಪರೇಟರ್

0

ಬೆಂಗಳೂರು:  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಅರಿಶಿನಕುಂಟೆಯಲ್ಲಿರುವ ನವಯುಗ ಟೋಲ್‌ ನಲ್ಲಿ ಶುಲ್ಕ ಕಟ್ಟದೆ ಹೋಗುತ್ತಿದ್ದ ಕ್ಯಾಂಟರ್‌ ತಡೆಯಲು ಹೋಗಿ ಟೋಲ್ ಆಪರೇಟರ್ ಪ್ರಾಣ ಕಳೆದುಕೊಂಡಿದ್ದಾನೆ.

Join Our Whatsapp Group

ನಾಗರಾಜ್(25) ಮೃತ ಯುವಕ.

ಟೋಲ್‌‌ ಆಪರೇಟರ್ ಆಗಿದ್ದ ನಾಗರಾಜ್, ನಿನ್ನೆ(ಮೇ.31) ರಾತ್ರಿ ಎಂದಿನಂತೆ ರಾತ್ರಿ ಪಾಳಿ ಕೆಲಸ ಮಾಡುತ್ತಿದ್ದ. ಅದರಂತೆ  ಟೋಲ್‌ನಲ್ಲಿ ಶುಲ್ಕ ಕಟ್ಟದೆ ಹೋಗುತ್ತಿದ್ದ ಲಾರಿಯನ್ನ ತಡೆಯಲು ಮುಂದಾಗಿದ್ದ. ಈ ವೇಳೆ ಹಿಂಬದಿಯಿಂದ ಬಂದ ಕ್ಯಾಂಟರ್ ಚಾಲಕ, ಅಜಾಗರೂಕತೆಯಿಂದ ಲಾರಿಯನ್ನು ನಾಗರಾಜ್​ ಮೇಲೆ ಹತ್ತಿಸಿ ಪರಾರಿಯಾಗಿದ್ದಾನೆ. ನಾಗರಾಜು ರಸ್ತೆಯಲ್ಲಿಯೇ ಸಾವು- ಬದುಕಿನ ನಡುವೆ ಹೋರಾಟ ನಡೆಸಿ ಬಳಿಕ ಸಾವನ್ನಪ್ಪಿದ್ದಾನೆ.

 ಸದ್ಯ ಘಟನೆಗೆ ಸಂಬಂಧಿಸಿದಂತೆ ನೆಲಮಂಗಲ ಸಂಚಾರಿ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು, ಕ್ಯಾಂಟರ್ ವಾಹನ ಚಾಲಕನನ್ನ ಹುಬ್ಬಳಿಯಲ್ಲಿ ವಶಕ್ಕೆ‌ ಪಡೆದು ತನಿಖೆ ನಡೆಸುತ್ತಿದ್ದಾರೆ.

ಹಿಂದಿನ ಲೇಖನಸರ್ವಾಧಿಕಾರಿ ಶಕ್ತಿಗಳನ್ನು ಸೋಲಿಸಿದಾಗ ಮಾತ್ರ ಪ್ರಜಾಪ್ರಭುತ್ವ ಯಶಸ್ವಿ: ಮಲ್ಲಿಕಾರ್ಜುನ ಖರ್ಗೆ
ಮುಂದಿನ ಲೇಖನಮತ ಎಣಿಕೆ ಕೇಂದ್ರಗಳ ಬಳಿ ಅಹಿತಕರ ಘಟನೆ ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಿ: ತುಷಾರ್ ಗಿರಿ ನಾಥ್