ಮೈಸೂರು: ನಂಜನಗೂಡು ತಾಲೂಕಿನಲ್ಲಿ ಒಟ್ಟು 27 ಕುಷ್ಠ ರೋಗಿಗಳು ಪತ್ತೆಯಾಗಿದ್ದಾರೆ ಎಂದು ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಬಿ. ಬೃಂದಾ ಮಾಹಿತಿ ನೀಡಿದ್ದಾರೆ.
ಇತ್ತೀಚೆಗೆ ಆರೋಗ್ಯ ಇಲಾಖೆ ಸರ್ವೆ ಮಾಡಿದ್ದು ಸರ್ವೆಯಲ್ಲಿ ನಂಜನಗೂಡು ಅತಿ ಹೆಚ್ಚು ಕುಷ್ಠ ರೋಗಿಗಳನ್ನು ಹೊಂದಿದೆ ಎಂದು ಮಾಹಿತಿ ಸಿಕ್ಕಿದೆ.
ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ವಿಭಾಗ, ನಂಜನಗೂಡು ತಾಲ್ಲೂಕು ಆರೋಗ್ಯಾಧಿಕಾರಿ ಸಹಯೋಗದಲ್ಲಿ ಉಚಿತ ಕುಷ್ಠರೋಗ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.
ಈ ವೇಳೆ ನಂಜನಗೂಡಿನಲ್ಲಿ ಹೆಚ್ಚಾಗಿ ಕುಷ್ಠರೋಗದ ರೋಗಿಗಳು ಕಂಡು ಬಂದಿದ್ದಾರೆ. ಇನ್ನು ನಂಜನಗೂಡಿನಲ್ಲಿ ಹೆಚ್ಚು ರೋಗಿಗಳು ಕಂಡು ಬಂದ ಹಿನ್ನೆಲೆ ಆರೋಗ್ಯ ಇಲಾಖೆಯಿಂದ ಕುಷ್ಠರೋಗ ರೋಗಿಗಳಿಗೆ ಉಚಿತವಾಗಿ ಶಿಬಿರವನ್ನು ಆಯೋಜನೆ ಮಾಡಿದ್ದೇವೆ. ಸರ್ಕಾರದಿಂದ ಆರು ತಿಂಗಳು ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತದೆ. ಈ ಕಾಯಿಲೆಯನ್ನು ತೋರಿಸಿಕೊಳ್ಳದೆ ಇದ್ದಲ್ಲಿ ಅಂಗವಿಕಲತೆಯಾಗಬಹುದು. ತಂಪು ಪ್ರದೇಶಗಳಲ್ಲಿ ಈ ರೋಗವು ಹೆಚ್ಚು ಕಾಣಿಸಿಕೊಳ್ಳುತ್ತದೆ. ಶರೀರವನ್ನು ನೀವು ತಪಾಸಣೆ ಮಾಡಿಸಿಕೊಳ್ಳಬೇಕು. ಸ್ಪರ್ಶ ಜ್ಞಾನವಿಲ್ಲದ ವ್ಯಕ್ತಿಗಳು ನಿಮ್ಮ ಹತ್ತಿರದ ಆಸ್ಪತ್ರೆಗಳಿಗೆ ತೆರಳಿ ಚಿಕಿತ್ಸೆ ಪಡೆದುಕೊಳ್ಳಬೇಕು. ರೋಗಿಗಳಿಗೆ ಅವಶ್ಯ ವಸ್ತುಗಳು ಹಾಗು ಔಷಧಿಗಳನ್ನು ನೀಡಿದ್ದೇವೆ ಎಂದು ಡಾ.ಬಿ. ಬೃಂದಾ ತಿಳಿಸಿದರು.
ಕೆ ಸುಧಾಕರ್ ಗೆ ಗಂಡಾಂತರ.
ಕಾಂಗ್ರೆಸ್ ಕಾರ್ಯಕರ್ತರಿಗೆ ಐಟಿ ಕಿರುಕುಳ
ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆ ದ್ವಂಸ
ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.