ಮನೆ ರಾಜ್ಯ ನಂಜುಂಡೇಶ್ವರನ ದರ್ಶನಕ್ಕೆಂದು ಹೋದ ಮಹಿಳೆ 3 ದಿನದ ಬಳಿಕ ಶವವಾಗಿ ಪತ್ತೆ

ನಂಜುಂಡೇಶ್ವರನ ದರ್ಶನಕ್ಕೆಂದು ಹೋದ ಮಹಿಳೆ 3 ದಿನದ ಬಳಿಕ ಶವವಾಗಿ ಪತ್ತೆ

0

ಮೈಸೂರು: ನಂಜನಗೂಡಿನ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಹೋಗಿ ಬರುವುದಾಗಿ ಹೇಳಿ ಹೋದ ಮಹಿಳೆ ಕಪಿಲಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.

ಮೈಸೂರಿನ ಸುಭಾಷ್ ನಗರದ ಮಂಜುನಾಥ್ ಎಂಬುವವರ ಪತ್ನಿ ಮಂಜುಳಾ (50)  ಮೃತ ಮಹಿಳೆ.

ನವೆಂಬರ್ 7 ರಂದು ಮಂಜುಳಾ ಮನೆಯಿಂದ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಹೋಗಿ ಬರುತ್ತೇನೆ ಎಂದು ಬಂದಿದ್ದರು. ಆದರೆ ವಾಪಸ್ ಮನೆ ಬಂದಿರಲಿಲ್ಲ. ಎಲ್ಲಾ ಕಡೆ ಹುಡುಕಿದರು ಇವರ ಸುಳಿವು ಸಿಕ್ಕಿರಲಿಲ್ಲ. ಇಂದು ಕಪಿಲಾ ನದಿಯಲ್ಲಿ ಶವ ಸಿಕ್ಕಿದೆ. ಬಳಿಕ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಶವವನ್ನು ಒಪ್ಪಿಸಲಾಗಿದೆ.

ಈ ಸಂಬಂಧ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುಮಾರು ಹತ್ತು ವರ್ಷಗಳಿಂದ ಹೊಟ್ಟೆ ನೋವು ಕಾಣಿಸಿಕೊಳ್ಳುತ್ತಿತ್ತು. ಪದೇ ಪದೇ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದರು. ಹೊಟ್ಟೆ ನೋವು ತಾಳಲಾರದೇ ನನ್ನ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪತಿ ಮಂಜುನಾಥ್ ದೂರಿನಲ್ಲಿ ತಿಳಿಸಿದ್ದಾರೆ.

ಹಿಂದಿನ ಲೇಖನಮನಃಸ್ಥಿತಿ (ಮೂಡ್ಸ್) ಪ್ರಭಾವ
ಮುಂದಿನ ಲೇಖನ‘ಗರಡಿ’ ಸಿನಿಮಾ ವಿಮರ್ಶೆ