ಮನೆ ಅಪರಾಧ ಸ್ನೇಹಿತನಿಂದಲೇ ಯುವಕನಿಗೆ ಚೂರಿ ಇರಿತ

ಸ್ನೇಹಿತನಿಂದಲೇ ಯುವಕನಿಗೆ ಚೂರಿ ಇರಿತ

0

ಬಂಟ್ವಾಳ: ಯುವಕನೊಬ್ಬನಿಗೆ ಆತನ ಸ್ನೇಹಿತನೇ ಚೂರಿಯಿಂದ ಇರಿದು ಗಾಯಗೊಳಿಸಿರುವ ಘಟನೆ ಫೆ.18 ರಂದು ಮಧ್ಯಾಹ್ನ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ.

ಪಾಣೆಮಂಗಳೂರು ನೆಹರು ನಗರ ನಿವಾಸಿ ಸುಲೈಮಾನ್ ಗಾಯಗೊಂಡ ಯುವಕ.

ಚಾಕು ಇರಿದ ನಿಸಾರ್ ಕೂಡ ನೆಹರು ನಗರ ನಿವಾಸಿಯಾಗಿದ್ದು, ಇಬ್ಬರು ಗಾಂಜ ವ್ಯಸನಿಗಳಾಗಿದ್ದರು ಎನ್ನಲಾಗಿದೆ.

ಮಧ್ಯಾಹ್ನ ಸುಮಾರು 1.30 ಗಂಟೆ ವೇಳೆ ಇವರಿಬ್ಬರು ನೆಹರು ನಗರದ ಬಳಿ ಬಂದಿದ್ದು, ಕ್ಷುಲ್ಲಕ ಕಾರಣಕ್ಕಾಗಿ ಮಾತಿಗೆ ಮಾತು ಬೆಳೆದು ನಿಶಾರ್ ಸುಲೈಮಾನ್’ಗೆ ಚೂರಿಯಿಂದ ಹೊಟ್ಟೆಯ ಭಾಗಕ್ಕೆ ಇರಿದಿದ್ದಾನೆ ಎನ್ನಲಾಗಿದೆ.

ಗಾಯಗೊಂಡ ಸುಲೈಮಾನ್’ನನ್ನು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಪೋಲೀಸ್ ಇನ್ಸ್ ಪೆಕ್ಟರ್ ವಿವೇಕಾನಂದ ಭೇಟಿ ನೀಡಿದ್ದಾರೆ.

ಆರೋಪಿ ನಿಸಾರ್ ನನ್ನು ಬಂಧಿಸಲು ಪೋಲೀಸರು ಬಲೆ ಬೀಸಿದ್ದಾರೆ.

ಹಿಂದಿನ ಲೇಖನಅಶ್ವತ್ಥನಾರಾಯಣ ರಾಜಕಾರಣದಲ್ಲಿರಲು ಯೋಗ್ಯನಲ್ಲ: ಸಿದ್ದರಾಮಯ್ಯ
ಮುಂದಿನ ಲೇಖನನಿಮ್ಮ ವೈವಾಹಿಕ ಜೀವನವನ್ನು ಹಾಳು ಮಾಡುವ ಅಂಶಗಳಿವು, ಈಗಲೇ ಸರಿಪಡಿಸೋದು ಒಳ್ಳೆಯದು