ಮನೆ ಅಪರಾಧ ಕಾರು ಬೈಕ್ ನಡುವೆ ಅಪಘಾತ: ಸವಾರ ಸ್ಥಳದಲ್ಲೇ ಸಾವು

ಕಾರು ಬೈಕ್ ನಡುವೆ ಅಪಘಾತ: ಸವಾರ ಸ್ಥಳದಲ್ಲೇ ಸಾವು

0

ಮೈಸೂರು: ಕಾರು-ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ  ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಸೀಗೂರು ಗ್ರಾಮದ ಮುಖ್ಯರಸ್ತೆಯಲ್ಲಿ ನಡೆದಿದೆ.

35 ವರ್ಷದ ಷಡಕ್ಷರಿಸ್ವಾಮಿ ಮೃತಪಟ್ಟ ಬೈಕ್ ಸವಾರ.  ಮಂಗಳವಾರ ಸಂಜೆ  ಘಟನೆ ನಡೆದಿದ್ದು, ತಾಲೂಕಿನ ಮೇಲೂರು ಗ್ರಾಮದ ನಿವಾಸಿಯಾಗಿರುವ ಷಡಕ್ಷರಿಸ್ವಾಮಿ ಅಲಿಯಾಸ್ ಮಂಜು, ಕೆಲಸದ ನಿಮಿತ್ತ ಪಿರಿಯಾಪಟ್ಟಣಕ್ಕೆ ತೆರಳಿ ಹಿಂತಿರುಗುತ್ತಿದ್ದರು.

ಈ ವೇಳೆ ಕೇರಳ ಮೂಲದ ಕಾರು ಡಿಕ್ಕಿ ಬೈಕ್ ಗೆ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿ  ಕೇರಳ ಮೂಲದ 5 ವಿದ್ಯಾರ್ಥಿಗಳಿದ್ದರು. ಇನ್ನು ಅಜಾಗರೂಕತೆ ಹಾಗೂ ವೇಗವಾಗಿ ಬಂದ ಹಿನ್ನೆಲೆ ಅಪಘಾತ ಸಂಭವಿಸಿದೆ ಎಂದು ಆರೋಪಿಸಿ ಮೃತನ ಕುಟುಂಬಸ್ಥರು ಬೆಟ್ಟದಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕಾರು ಚಾಲಕ ಹಾಗೂ ಆತನ ಸ್ನೇಹಿತರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹಿಂದಿನ ಲೇಖನಮುತ್ತಪ್ಪ ರೈ ಬಯೋಪಿಕ್ ನಲ್ಲಿ ರಿಯಲ್ ಸ್ಟಾರ್ ಉಪ್ಪಿ
ಮುಂದಿನ ಲೇಖನಟಿಪ್ಪು ಸ್ವಾತಂತ್ರ್ಯ ಯೋಧ ಎನ್ನುವುದೇ ಉತ್ಪ್ರೇಕ್ಷೆ: ಬಿಜೆಪಿ ಟ್ವೀಟ್