ತುಮಕೂರು: ಕೆಎಸ್ ಆರ್ ಟಿಸಿ ಬಸ್ ಹಾಗೂ ಆಟೋ ನಡುವೆ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಆಟೋದಲ್ಲಿದ್ದ ಓರ್ವ ಮಹಿಳೆ ಹಾಗೂ 9 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಕೊಡಿಗೇನಹಳ್ಳಿ ಸಮೀಪವಿರುವ ಜಯಮಂಗಲಿ ಬ್ರಿಡ್ಜ್ ಬಳಿ ನಡೆದಿದೆ.
ಆಟೋ ಮಹಿಳೆಯರನ್ನು ಕರೆದುಕೊಂಡು ಗೌರಿಬಿದನೂರು ಗಾರ್ಮೆಂಟ್ಸ್ ಫ್ಯಾಕ್ಟರಿಗೆ ತೆರಳುತ್ತಿತ್ತು. ಈ ವೇಳೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.
ಜೋಗೇನೇಹಳ್ಳಿ ಗ್ರಾಮದ ಲಕ್ಷ್ಮೀದೇವಿ (33) ಮೃತಪಟ್ಟ ಮಹಿಳೆ.
ಉಳಿದ 9 ಮಹಿಳೆಯರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಕೊಡಿಗೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.