ಮನೆ ಅಪರಾಧ ಲಾರಿ – ಬೈಕ್ ನಡುವೆ ಅಪಘಾತ: ಸವಾರ ಸಾವು

ಲಾರಿ – ಬೈಕ್ ನಡುವೆ ಅಪಘಾತ: ಸವಾರ ಸಾವು

0

ತುಮಕೂರು: ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ತುಮಕೂರು ನಗರದ ಶಿರಾ ಗೇಟ್ ಹತ್ತಿರುವಿರುವ ಎಸ್.ಮಾಲ್ ಬಳಿ ನಡೆದಿದೆ.

ತುಮಕೂರಿನ ಶಾಂತಿನಗರದ ನಿವಾಸಿ ರಾಜಣ್ಣ (64) ಮೃತ ದುರ್ದೈವಿ.

ಬೆಂಗಳೂರಿನ ಲಾಲ್‌ಬಾಗ್ ನಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ರಾಜಣ್ಣ, ಇಂದು ಬೆಳಿಗ್ಗೆ ತರಕಾರಿ, ಹೂ-ಹಣ್ಣು ತರಲು ಅಂತರಸನಹಳ್ಳಿ ಮಾರುಕಟ್ಟೆಗೆ ತೆರಳಿದ್ದರು. ಮಾರ್ಕೆಟ್ ನಿಂದ ಮನೆಗೆ ವಾಪಸಾಗುತ್ತಿದ್ದ ವೇಳೆ ಅಪಘಾತ ಅಪಘಾತ ಸಂಭವಿಸಿದೆ.

ತುಮಕೂರು ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹಿಂದಿನ ಲೇಖನಶಿರಸಿ: ಒಂದೇ ಕುಟುಂಬದ ಐವರು ನೀರಿನಲ್ಲಿ ಮುಳುಗಿ ಸಾವು
ಮುಂದಿನ ಲೇಖನಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಕ್ಷೆ ಕ್ರಿಶ್ಚಿಯನ್ ಸಮುದಾಯದ ಕೊಡುಗೆ ಅತ್ಯುತ್ತಮ: ಮುಖ್ಯಮಂತ್ರಿ ಸಿದ್ದರಾಮಯ್ಯ