ಮನೆ ರಾಜ್ಯ ಲಾರಿ ಮತ್ತು ಕಾರಿನ ನಡುವೆ ಅಪಘಾತ: ಮೂವರ ಸಾವು

ಲಾರಿ ಮತ್ತು ಕಾರಿನ ನಡುವೆ ಅಪಘಾತ: ಮೂವರ ಸಾವು

0

ತುಮಕೂರು: ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ನಡೆದಿದೆ.

Join Our Whatsapp Group

ಆಕಾಶ್ (20) ಹೇಮಂತ್ (28) ಹಾಗೂ ಶಿವಕುಮಾರ್ ಸಾವನ್ನಪ್ಪಿದವರು.

ಉಜ್ವಲ್ ಕೃಷ್ಣ ಗಾಯಗೊಂಡ ವ್ಯಕ್ತಿ.

ಲಾರಿ ಪಾವಗಡದಿಂದ ತುಮಕೂರು ಕಡೆ ಬರುತ್ತಿತ್ತು.  ಇದೆ ವೇಳೆ ಕಾರು ಬೆಂಗಳೂರಿನಿಂದ ಪಾವಗಡ ಕಡೆ ತೆರಳುವಾಗ ಅಪಘಾತ ಸಂಭವಿಸಿದೆ.  ಮೃತರೆಲ್ಲರೂ ಪಾವಗಡದ ಮೂಲದವರು ಎನ್ನಲಾಗಿದೆ.

ಡಿಕ್ಕಿಯಾದ ಪರಿಣಾಮ ಕಾರು ನಜ್ಜುಗುಜ್ಜಾಗಿದೆ. ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದಿನ ಲೇಖನಹೊಸಪೇಟೆ: ಖಾಸಗಿ ಬಸ್ ಉರುಳಿ 10 ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ
ಮುಂದಿನ ಲೇಖನಕಾವೇರಿ ವಿವಾದ: ಕೇಂದ್ರ ಸರ್ಕಾರ ಮತ್ತು ಬಿಜೆಪಿ  ಕನ್ನಡಪರ ಸಂಘಟನೆ, ರೈತರ ಜೊತೆಗಿದೆ- ಶೋಭಾ ಕರಂದ್ಲಾಜೆ