ಚಿತ್ರದುರ್ಗ: 2 ಲಾರಿಗಳ ನಡುವೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ, 9 ಜಾನುವಾರುಗಳು ಸಾವಪ್ಪಿರುವಂತಹ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಕೆ ಆರ್ ಹಳ್ಳಿ ಗೇಟ್ ಬಳಿ ಅಪಘಾತ ನಡೆದಿದೆ.
ಮಹರಾಷ್ಟ್ರದಿಂದ ಕೋಲಾರಕ್ಕೆ ಲಾರಿಯಲ್ಲಿ ಜಾನುವಾರುಗಳನ್ನು ಸಾಗಿಸಲಾಗುತ್ತಿತ್ತು. ಮಹಾರಾಷ್ಟ್ರ ಮೂಲದ ಸಹ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮತ್ತೋರ್ವ ಚಾಲಕನಿಗೆ ಗಾಯಗಳಾಗಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
10 ಜಾನುವಾರುಗಳ ಪೈಕಿ 9 ಸಾವಪ್ಪಿದ್ದು, ಗಾಯಗೊಂಡಿರುವ 1 ಜಾನುವಾರನ್ನು ಚಳ್ಳಕೆರೆ ಬಳಿಯ ಗೋಶಾಲೆಗೆ ಶಿಫ್ಟ್ ಮಾಡಲಾಗಿದೆ. ಹಿರಿಯೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Saval TV on YouTube