ಮನೆ ರಾಷ್ಟ್ರೀಯ ಪಶ್ಚಿಮ ಬಂಗಾಳದಲ್ಲಿ ಬಸ್‌, ಆಟೋ ನಡುವೆ ಡಿಕ್ಕಿ: 9 ಮಂದಿ ದುರ್ಮರಣ, ಪರಿಹಾರ ಘೋಷಿಸಿದ ಪ್ರಧಾನಿ...

ಪಶ್ಚಿಮ ಬಂಗಾಳದಲ್ಲಿ ಬಸ್‌, ಆಟೋ ನಡುವೆ ಡಿಕ್ಕಿ: 9 ಮಂದಿ ದುರ್ಮರಣ, ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

0
ಚಿತ್ರ ಕೃಪೆ: ಎಎನ್‌ ಐ

ಬಿರ್ ಭೂಮ್ (Birbhum): ರಾಜ್ಯ ಸಾರಿಗೆ ಸಂಸ್ಥೆ ಬಸ್ ಮತ್ತು ಆಟೋ ನಡುವೆ ಡಿಕ್ಕಿ ಸಂಭವಿಸಿ 9 ಮಂದಿ ಮೃತಪಟ್ಟಿರುವ ಘಟನೆ ಪಶ್ಚಿಮ ಬಂಗಾಳದ ಬಿರ್ ಭೂಮ್ ಜಿಲ್ಲೆಯಲ್ಲಿ ನಡೆದಿದೆ.

ರಾಮ್ ಪುರಹತ್ ನ ಮಲ್ಲರ್ ಪುರ ಬಳಿ ಈ ಅಪಘಾತ ಸಂಭವಿಸಿದೆ. ಜನರಿಂದ ತುಂಬಿದ್ದ ಆಟೋ ಎದುರಿಗೆ ಬರುತ್ತಿದ್ದ ರಾಜ್ಯ ಸಾರಿಗೆ ಸಂಸ್ಥೆ ಬಸ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಆಟೋದಲ್ಲಿದ್ದ 8 ಮಹಿಳಾ ಕೃಷಿ ಕಾರ್ಮಿಕರು ಹಾಗೂ ಆಟೋ ಚಾಲಕ ಮೃತಪಟ್ಟಿರುವುದಾಗಿ ಬಿರ್ ಭೂಮ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಂದ್ರ ನಾಥ್ ತ್ರಿಪಾಠಿ ಹೇಳಿದ್ದಾರೆ. ಮೃತಪಟ್ಟ 8 ಮಹಿಳೆಯರು ಭತ್ತದ ಗದ್ದೆಯಿಂದ ಮನೆಗೆ ಹಿಂತಿರುಗುತ್ತಿದ್ದರು ಎಂದು ತಿಳಿಸಿದ್ದಾರೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಈ ಅಪಘಾತದ ಬಗ್ಗೆ ದುಃಖ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಮೃತರ ಸಂಬಂಧಿಕರಿಗೆ 2 ಲಕ್ಷ ಹಾಗೂ ಗಾಯಾಗಳುಗಳಿಗೆ 50  ರೂಪಾಯಿ ಪರಿಹಾರ ಘೋಷಿಸಿದ್ದಾರೆ.  

ಹಿಂದಿನ ಲೇಖನಶ್ವಾಸಕೋಸದ ಆರೋಗ್ಯಕ್ಕೆ ಯೋಗಾಸನ
ಮುಂದಿನ ಲೇಖನಇಂದಿನ ರಾಶಿ ಭವಿಷ್ಯ