ಮನೆ ರಾಜ್ಯ ಕೊಪ್ಪಳ ಸಮೀಪ ಭೀಕರ ಅಪಾಘತ: ಐವರ ದುರ್ಮರಣ

ಕೊಪ್ಪಳ ಸಮೀಪ ಭೀಕರ ಅಪಾಘತ: ಐವರ ದುರ್ಮರಣ

0

ಕೊಪ್ಪಳ (Koppala): ಭೀಕರ ರಸ್ತೆ ಅಪಘಾತದಲ್ಲಿ 5 ಮಂದಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪುರ ಬಳಿ ಸಂಭವಿಸಿದೆ. ಘಟನೆಯಲ್ಲಿ ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಬಿನ್ನಾಳ ಗ್ರಾಮದ ದೇವಪ್ಪ ಕೊಪ್ಪದ(62), ಗಿರಿಜಮ್ಮ(45), ಶಾಂತಮ್ಮ(35), ಪಾರ್ವತಮ್ಮ(32) ಕಸ್ತೂರಮ್ಮ(20) ಮೃತಪಟ್ಟವರು. ಗಾಯಗೊಂಡಿರುವ ಚಾಲಕ ಹರ್ಷವರ್ಧನ, ಮಕ್ಕಳಾದ ಬಸವರಾಜ, ಪುಟ್ಟರಾಜ, ಭೂಮಿಕಾ ಅವರನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಕೊಪ್ಪಳದಲ್ಲಿ ಆಯೋಜನೆ ಆಗಿದ್ದ ಕುಟುಂಬದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಯಲಬುರ್ಗಾ ತಾಲ್ಲೂಕಿನ ಬಿನ್ನಾಳ ಗ್ರಾಮಕ್ಕೆ ವಾಪಸ್ ಆಗುತ್ತಿದ್ದ ವೇಳೆ ಕಾರು ಅಪಘಾತಕ್ಕೀಡಾಗಿದೆ. ವಾಹನದಲ್ಲಿ ಒಟ್ಟು ಒಂಬತ್ತು ಮಂದಿ ಪ್ರಯಾಣಿಸುತ್ತಿದ್ದಾರೆ.

ಹಿಂದಿನ ಲೇಖನಇಂದಿನ ರಾಶಿ ಭವಿಷ್ಯ
ಮುಂದಿನ ಲೇಖನಜು.26 ರಿಂದ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು ಸಂಚಾರ ಆರಂಭ