ಮನೆ ಅಪರಾಧ ಬೆಂಗಳೂರು – ಮೈಸೂರು ಎಕ್ಸ್’ಪ್ರೆಸ್ ವೇನಲ್ಲಿ ಅಪಘಾತ: ಮೂವರ ಸಾವು

ಬೆಂಗಳೂರು – ಮೈಸೂರು ಎಕ್ಸ್’ಪ್ರೆಸ್ ವೇನಲ್ಲಿ ಅಪಘಾತ: ಮೂವರ ಸಾವು

0

ರಾಮನಗರ:  ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ದುರ್ಘಟನೆಗಳು ನಡೆಯುತ್ತಲೇ ಇದ್ದು, ರಾಮನಗರ ತಾಲೂಕಿನ ಜಯಪುರ ಗೇಟ್ ಬಳಿ ನಡೆದ ದುರಂತದಲ್ಲಿ ಮೂವರು ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ.

Join Our Whatsapp Group

ಬೆಂಗಳೂರಿನಿಂದ ಮೈಸೂರಿಗೆ ಮೂವರು ಒಂದು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಹಿಂಬದಿಯಿಂದ ಕಾರಿಗೆ ಡಿಕ್ಕಿ ಹೊಡೆದು ನೆಲಕ್ಕೆ ಅಪ್ಪಳಿಸಿದ್ದಾರೆ. ಈ ವೇಳೆ ಮತ್ತೊಂದು ಕಾರು ಬಂದು ಅವರಿಗೆ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ.

ಒಂದೇ ಬೈಕ್’​ನಲ್ಲಿ ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಮೂವರು ಮುಂಭಾಗದಲ್ಲಿ ಕೆಟ್ಟು ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿಯ ರಭಸಕ್ಕೆ ಬೈಕ್​;ನಲ್ಲಿದ್ದ ಮೂವರು ಹೆದ್ದಾರಿಗೆ ಬಿದ್ದಿದ್ದಾರೆ. ಇದೇ ವೇಳೆ ಹಿಂಬದಿಯಿಂದ ಬಂದ ಮತ್ತೊಂದು ಕಾರು ಡಿಕ್ಕಿ ಹೊಡೆದ ಪರಿಣಾಮ ಹೆದ್ದಾರಿಗೆ ಬಿದ್ದ ಮೂವರು ಅಲ್ಲೇ ಕೊನೆಯುಸಿರೆಳೆದಿದ್ದಾರೆ.

 ಸ್ಥಳಕ್ಕೆ ಆಗಮಿಸಿದ ರಾಮನಗರ ಸಂಚಾರಿ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಹಿಂದಿನ ಲೇಖನಜೆಡಿಎಸ್ ನದ್ದು ಅಧಿಕೃತ ಹೊಂದಾಣಿಕೆಯೋ, ರಾಜಕೀಯ ವ್ಯಭಿಚಾರವೋ: ಸಿ.ಟಿ.ರವಿ
ಮುಂದಿನ ಲೇಖನಅಹಂಕಾರದಿಂದ ಅವನತಿ ಹೊಂದಿದ ನಹುಷನ ಕಥೆ