ಮನೆ ರಾಜ್ಯ ಮೈ-ಬೆಂ ದಶಪಥ ಹೆದ್ದಾರಿಯಲ್ಲಿ ಅಪಘಾತ:ಒಂದು ಬಲಿ

ಮೈ-ಬೆಂ ದಶಪಥ ಹೆದ್ದಾರಿಯಲ್ಲಿ ಅಪಘಾತ:ಒಂದು ಬಲಿ

0

ಮಂಡ್ಯ:ಮೈಸೂರು – ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಕ್ಯಾಂಟರ್ ಗೆ ಸ್ಕೂಟಿ ಡಿಕ್ಕಿ ಹೊಡೆದು ಓರ್ವ ಮಹಿಳೆ ಸ್ಥಳದಲ್ಲೆ ಸಾವನ್ನಪ್ಪಿ, ಬಾಲಕಿ ಸೇರಿ ಇಬ್ಬರು ಗಾಯ‌ಗೊಂಡಿದ್ದಾರೆ.

Join Our Whatsapp Group


ಮಂಡ್ಯದ ಮದ್ದೂರು ಬಳಿಯ ಮೈ-ಬೆಂ ದಶಪಥ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ.
ಮೃತ ಮಹಿಳೆಯನ್ನು ಚನ್ನಪಟ್ಟಣ ಮೂಲದ ವರಲಕ್ಷ್ಮಿ(60) ಎಂದು ಗುರುತಿಸಲಾಗಿದೆ. ಆಸ್ಪತ್ರೆಯಲ್ಲಿ ದಾಖಲಾಗಿದ್ದ ಸಂಬಂಧಿ ನೋಡಲು ವರಲಕ್ಷ್ಮಿ, ಪುತ್ರ ಸುಧಾಕರ್, ಮೊಮ್ಮಗಳು ಗೌತಮಿ ಬಂದಿದ್ದರು. ಹೋಂಡಾ ಆಕ್ಟೀವ್ ಬೈಕ್ ನಲ್ಲಿ ಬಂದಿದ್ದ ಮೂವರು ಸಂಬಂಧಿಕರ ಆರೋಗ್ಯ ವಿಚಾರಿಸಿ ವಾಪಸ್ಸು ಚನ್ನಪಟ್ಟಣಕ್ಕೆ ತೆರಳುತ್ತಿದ್ದಾಗ ಘಟನೆ ನಡೆದಿದೆ.
ಕ್ಯಾಂಟರ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿ‌ ಹೊಡೆದು, ಬಳಿಕ ಹೆದ್ದಾರಿ ಎಕ್ಸ್ ಪ್ರೆಸ್ ವೇ ನಿಂದ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಗಂಭೀರ ಗಾಯಗೊಂಡಿದ್ದ ವರಲಕ್ಷ್ಮಿ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಮೃತ ಮಹಿಳೆಯ ಗಾಯಗೊಂಡ ಪುತ್ರ ಹಾಗೂ ಮೊಮ್ಮಗಳನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಹಿಂದಿನ ಲೇಖನನವೀಕರಿಸಬಹುದಾದ ಇಂಧನ ವಲಯದಲ್ಲಿ ಖಾಸಗಿ ಹೂಡಿಕೆ ಆಕರ್ಷಣೆಗೂ ಒತ್ತು: ಇಂಧನ ಸಚಿವ ಜಾರ್ಜ್
ಮುಂದಿನ ಲೇಖನಎದ್ದು ಬರುತಾರೆ ನೋಡೆ ತಾ