ಮನೆ ಅಪರಾಧ ಅಪಘಾತ: ಪೊಲೀಸ್ ಕಾನ್ಸ್ ಟೇಬಲ್ ಸಾವು

ಅಪಘಾತ: ಪೊಲೀಸ್ ಕಾನ್ಸ್ ಟೇಬಲ್ ಸಾವು

0

ಸಂತೇಮರಹಳ್ಳಿ: ಸಮೀಪದ ರಾಷ್ಟ್ರೀಯ ಹೆದ್ದಾರಿ 209ರ ಹುಲ್ಲೇಪುರ ಕ್ರಾಸ್ ಬಳಿ ಸೋಮವಾರ ರಾತ್ರಿ ನಡೆದ ಅಪಘಾತದಲ್ಲಿ ಪೊಲೀಸ್ ಕಾನ್‌ಸ್ಟೆಬಲ್‌ ಮೃತಪಟ್ಟಿದ್ದು, ಎಎಸ್ಐ ಗಾಯಗೊಂಡಿದ್ದಾರೆ.

ಸಂತೇಮರಹಳ್ಳಿ ಠಾಣೆಯ ಕಾನ್‌ಸ್ಟೆಬಲ್‌, ತಾಲ್ಲೂಕಿನ ಪ್ರಸಾದ್ (33) ಮೃತಪಟ್ಟವರು.

ಅದೇ ಠಾಣೆಯ ಎಎಸ್‌ಐ ರಾಜು ಅವರಿಗೆ ಗಂಭೀರ ಗಾಯಗಳಾಗಿದ್ದು, ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜು ಹಾಗೂ ಪ್ರಸಾದ್ ಅವರು ರಾತ್ರಿ 10.45 ಗಂಟೆ ಸುಮಾರಿಗೆ ಬೈಕ್‌ನಲ್ಲಿ ಹೋಗುತ್ತಿದ್ದರು. ಈ ಸಂದರ್ಭದಲ್ಲಿ ಹಿಂದಿನಿಂದ ಬಂದ ಕಾರು ಇವರ ಬೈಕ್‌ಗೆ ಡಿಕ್ಕಿ ಹೊಡೆದಿದೆ. ತೀವ್ರವಾಗಿ ಗಾಯಗೊಂಡಿದ್ದ ಪ್ರಸಾದ್ ಅವರು ಮೃತಪಟ್ಟರೆ, ಗಾಯಗೊಂಡಿದ್ದ ಎಎಸ್‌ಐ ರಾಜು ಅವರು ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.

ಕಾರು ಚಾಲಕ ಸತೀಶ್ ಕುಮಾರ್ ಎಂಬುವವರ ವಿರುದ್ಧ ಚಾಮರಾಜನಗರ ಸಂಚಾರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹಿಂದಿನ ಲೇಖನವಿದ್ಯಾರ್ಥಿಗಳಲ್ಲಿ ಇಚ್ಛಾಶಕ್ತಿ ತುಂಬಾ ಮುಖ್ಯ: ಮೈಸೂರು ವಿವಿ ಕುಲಸಚಿವ ಪ್ರೊ.ಆರ್.ಶಿವಪ್ಪ
ಮುಂದಿನ ಲೇಖನಮೈಸೂರಿನಲ್ಲಿ ಹಾಡಹಗಲೇ ಕಾರು ಅಡ್ಡಗಟ್ಟಿ ದರೋಡೆ