ಮನೆ ಅಪರಾಧ ಸೈಬರ್ ವಂಚಕರಿಗೆ ಸಿಮ್ ಕಾರ್ಡ್ ಪೂರೈಸುತ್ತಿದ್ದ ಆರೋಪಿ ಬಂಧನ

ಸೈಬರ್ ವಂಚಕರಿಗೆ ಸಿಮ್ ಕಾರ್ಡ್ ಪೂರೈಸುತ್ತಿದ್ದ ಆರೋಪಿ ಬಂಧನ

0

ಮಂಗಳೂರು: ಸೈಬರ್​ ವಂಚಕರಿಗೆ ​ ಸಿಮ್ ಕಾರ್ಡ್​​ ಪೂರೈಸುತ್ತಿದ್ದ ಆರೋಪಿಯನ್ನು ಮಂಗಳೂರಿನ ಸೆನ್ ಕ್ರೈಂ ಪೊಲೀಸರು ದೆಹಲಿ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.

Join Our Whatsapp Group

ಕಣಾತಲ ವಾಸುದೇವ ರೆಡ್ಡಿ (25) ಬಂಧಿತ ಆರೋಪಿ. ಆರೋಪಿ ಸೈಬರ್ ವಂಚಕರಿಗೆ ಭಾರತದಿಂದ ವಿವಿಧ ಕಂಪನಿಗಳ 500ಕ್ಕೂ ಹೆಚ್ಚು ಸಿಮ್​ಗಳನ್ನು ಪೂರೈಕೆ ಮಾಡಿದ್ದನು.

ಆರೋಪಿ ಕಣಾತಲ ವಾಸುದೇವ ರೆಡ್ಡಿ ಓಡಿಶಾ ಮೂಲದವನು. ಸೈಬರ್ ವಂಚನೆ ಪ್ರಕರಣದ ತನಿಖೆ ನಡೆಸುತ್ತಿದ್ದ ವೇಳೆ ಆರೋಪಿ ಕಣಾತಲ ವಾಸುದೇವ ರೆಡ್ಡಿ ಸಿಮ್ ಪೂರೈಕೆ ಮಾಹಿತಿ ಮಂಗಳೂರಿನ ಸೆನ್ ಪೊಲೀಸರಿಗೆ ಗೊತ್ತಾಗಿದೆ. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿ ಕಣಾತಲ ವಾಸುದೇವ ರೆಡ್ಡಿಯ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾದರು.

ವಂಚಕ ನಡವೂಲು ವೀರವೆಂಕಟ ಸತ್ಯನಾರಾಯಣ ರಾಜು ಎಂಬುವನು ಹಣ ವಿನಿಯೋಗಿಸಲು ವಾಟ್ಸಾಪ್​ ಮೂಲಕ ನಕಲಿ ಲಿಂಕ್ ಕಳುಹಿಸಿ ಅದರ ಮೂಲಕ ಲಕ್ಷಾಂತರ ರೂ. ದೋಚಿದ್ದನು. ಹೀಗೆ, ಹಂತ ಹಂತವಾಗಿ 10,84,017 ರೂಪಾಯಿ ಪಡೆದು ವಂಚನೆ ಎಸಗಿದ್ದಾನೆ. ಪ್ರಕರಣ ಸಂಬಂಧ ಪೊಲೀಸರು ಈಗಾಗಲೇ ಸೈಬರ್​ ವಂಚಕ ನಡವೂಲು ವೀರವೆಂಕಟ ಸತ್ಯನಾರಾಯಣ ರಾಜುನನ್ನು ಬಂಧಿಸಿದ್ದಾರೆ.

ಆರೋಪಿ ನಡವೂಲು ವೀರವೆಂಕಟ ಸತ್ಯನಾರಾಯಣ ರಾಜುನನ್ನು ವಿಚಾರಣೆಗೆ ಒಳಪಡಿಸಿದಾಗ ಸಿಮ್ ಮಾರಾಟ ದಂಧೆಯ ಬಗ್ಗೆ ಬಾಯಿ ಬಿಟ್ಟಿದ್ದಾನೆ. ಕೂಡಲೇ ಪೊಲೀಸರು ಕಣಾತಲ ವಿರುದ್ಧ ಲುಕ್ಔಟ್ ನೋಟಿಸ್ ಹೊರಡಿಸಿದ್ದರು. ಆರೋಪಿ ಕಣಾತಲ ದುಬೈಗೆ ತೆರಳು ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ, ಇಲ್ಲಿನ ಇಮಿಗ್ರೇಶನ್ ಅಧಿಕಾರಿಗಳು ಆರೋಪಿಯನ್ನು ವಶಕ್ಕೆ ಪಡೆದರು. ಇನ್ನುಳಿದ ಆರೋಪಿಗಳ ಪತ್ತೆಗೆ ಮಂಗಳೂರು ಪೊಲೀಸರಿಂದ ತನಿಖೆ ಮುಂದುವರೆದಿದೆ.

ಪ್ರಕರಣ ಸಂಬಂಧ ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅರ್ಗವಾಲ್ ಮಾತನಾಡಿ, ಮೂಡಬಿದಿರೆ ನಿವಾಸಿಯೊಬ್ಬರು‌ ಸೈಬರ್ ವಂಚನೆ ಬಗ್ಗೆ ದೂರು ನೀಡಿದ್ದರು. ತನಿಖೆ ಕೈಗೊಂಡು ಹಣ ವರ್ಗಾವಣೆಯಾದ ಖಾತೆಯನ್ನು ಫ್ರೀಝ್ ಮಾಡಿದ್ದೇವು. 9,50,000 ಹಣವನ್ನು ನಾವು ಪ್ರೀಝ್ ಮಾಡಿದ್ದೇವೆ ಎಂದು ಹೇಳಿದರು.

ಕೇರಳ ಮತ್ತು‌ ಗುಜರಾತ್ ಮೂಲದ ಎರಡು ಖಾತೆಗಳಿಗೆ ಹಣ ವರ್ಗಾವಣೆಯಾಗಿತ್ತು. ಟೆಕ್ನಿಕಲ್ ವಿಚಾರಣೆ ಸಂದರ್ಭದಲ್ಲಿ ಸಿಮ್ ಕಾರ್ಡ್ ಬಗ್ಗೆ ಮಾಹಿತಿ ಗೊತ್ತಾಯಿತು. ವಿಶಾಖಪಟ್ಟಣ ಮತ್ತು ಗೋಧಾವರಿ ಪ್ರದೇಶದಿಂದ‌ ಸಿಮ್ ಕಾರ್ಡ್ ನೀಡಿರುವುದು ತಿಳಿಯಿತು. ನಮ್ಮ ಒಂದು ತಂಡ ಆಂಧ್ರಪ್ರದೇಶದ ಗೋಧಾವರಿಗೆ ತೆರಳಿ‌ ಸತ್ಯನಾರಾಯಣ ರಾಜು ಎಂಬಾತನನ್ನು ಬಂಧಿಸಿದೆ. ಆತನಿಂದ 300ಕ್ಕೂ ಹೆಚ್ಚು ಸಿಮ್​ಗಳನ್ನು ವಶಕ್ಕೆ ಪಡೆದಿದ್ದೇವೆ ಎಂದು ತಿಳಸಿದ್ದಾರೆ.

ಸತ್ಯನಾರಾಯಣ ರಾಜು ಬೇರೆ ಬೇರೆಯವರ ಹೆಸರಿನಲ್ಲಿ ಸಿಮ್ ಕಾರ್ಡ್ ಪಡೆಯುತ್ತಿದ್ದನು. ದುಬೈನಲ್ಲಿದ್ದ ವಿನ್ಸೆಕ್ಟ್ ಎಂಬ ಕಂಪೆನಿಗೆ ಈ ಸಿಮ್ ಪೂರೈಸುತ್ತಿದ್ದನು. ಪ್ರಾಥಮಿಕ ಮಾಹಿತಿ ಪ್ರಕಾರ ಇದು ಚೀನಾ ಮೂಲದ ಕಂಪೆನಿಯೆಂದು ಗೊತ್ತಾಗಿದೆ. ದುಬೈನಲ್ಲಿ ಕಾಲ್ ಸೆಂಟರ್ ತೆರೆದು ಜನರಿಗೆ ಸ್ಟಾಕ್ ಮಾಟ್ಪನಲ್ಲಿ ಇನ್ವೆಸ್ಟ್ ಮಾಡಿಯೆಂದು ಹೇಳಿ ವಂಚನೆ ಮಾಡುತ್ತಿದ್ದರು ಎಂದು ಹೇಳಿದರು.

ಸತ್ಯನಾರಾಯಣ ರಾಜು ವಿಚಾರಣೆ ವೇಳೆ ಮುತ್ತು ಶಿವ ಮತ್ತು ಕಣಾತಲ ವಾಸುದೇವ ರೆಡ್ಡಿ ಎಂಬ ಇಬ್ಬರ ಹೆಸರು‌ ಬಾಯಿಬಿಟ್ಟಿದ್ದನು. ಇವರಿಬ್ಬರು ದುಬೈನಲ್ಲಿ ಆಪರೇಟರ್ ಮಾಡುತ್ತಿದ್ದರು. ಇಬ್ಬರ ಸಂಪೂರ್ಣ ಮಾಹಿತಿ ಪಡೆದು ಲುಕ್ ಔಟ್ ನೋಟೀಸ್ ಜಾರಿ ಮಾಡಿದ್ದೇವು. ಲುಕ್​ಔಟ್​ ಜಾರಿ ಬಳಿಕ‌ ಮುತ್ತು ಶಿವನನ್ನು ಮೂರು ತಿಂಗಳ ಹಿಂದೆ ಬಂದಿಸಿದ್ದೆವು. ಎರಡು‌ ದಿನದ ಹಿಂದೆ ದೆಹಲಿಯಿಂದ ದುಬೈಗೆ ಹೋಗುವಾಗ ವಾಸುದೇವ ರೆಡ್ಡಿಯನ್ನು ಬಂಧಿಸಿದ್ದೇವೆ ಎಂದು ಹೇಳಿದರು.