ಬೆಂಗಳೂರು: ಕೊಲೆ ಯತ್ನ ಪ್ರಕರಣದ ಆರೋಪಿಯೊಬ್ಬ ಪೊಲೀಸರಿಂದ ತಪ್ಪಿಸಿಕೊಳ್ಳಲು ಪ್ರೈವೇಟ್ ಜೆಟ್ ಮೂಲಕ ನೆರೆ ರಾಷ್ಟ್ರಕ್ಕೆ ಎಸ್ಕೇಪ್ ಆಗಿರುವ ಅಪರೂಪದ ಘಟನೆ ವರದಿಯಾಗಿದೆ.
ಬೆಂಗಳೂರಿನ ಆರ್ಟಿ ನಗರ ಠಾಣಾ ವ್ಯಾಪ್ತಿಯ ಖಾಸಗಿ ಹೋಟೆಲ್ ನಲ್ಲಿ ನಡೆದಿದ್ದ ಉದ್ಯಮಿಗಳ ಪುತ್ರರ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಯತ್ನದ ಪ್ರಕರಣದಡಿಯಲ್ಲಿ ಪೊಲೀಸರು ಹುಡುಕುತ್ತಿದ್ದಾರೆ ಎಂದು ಗೊತ್ತಾದ ತಕ್ಷಣ ಆರೋಪಿ ಪ್ರೈವೇಟ್ ಜೆಟ್ ಮೂಲಕ ಎಸ್ಕೇಪ್ ಆಗಿದ್ದಾನೆ. ಹೀಗಾಗಿ ಆರೋಪಿ ಬಂಧನಕ್ಕಾಗಿ ಮುಂಬೈಗೆ ತೆರಳಿದ್ದ ಆರ್ ಟಿ ನಗರ ಪೊಲೀಸರು ಬರಿಗೈನಲ್ಲಿ ವಾಪಾಸ್ ಆಗಿದ್ದಾರೆ.
ಉದ್ಯಮಿ ವೇದಾಂತ್ ದುಗಾರ್ ಪರಾರಿಯಾದ ಆರೋಪಿ.
ಕಳೆದ ತಿಂಗಳು ಅಂದರೆ ಮೇ 9ರಂದು ವೈಷ್ಣವಿ ಬಿಲ್ಡರ್ಸ್ ಚೇರ್ಮನ್ ದರ್ಶನ್ ಮೇಲೆ ಉದ್ಯಮಿ ವೇದಾಂತ್ ದುಗಾರ್ ಹಲ್ಲೆ ನಡೆಸಿದ್ದ. ಈ ಕುರಿತು ಆರ್ ಟಿ ನಗರ ಠಾಣೆಯಲ್ಲಿ ಕೊಲೆಯತ್ನದ ಪ್ರಕರಣ ದಾಖಲಾಗಿತ್ತು. ಪೊಲೀಸರು ಈ ಪ್ರಕರಣದ ಹಿಂದೆ ಬೀಳುತ್ತಿದ್ದಂತೆಯೇ ವೇದಾಂತ್ ಮೇ 11ರಂದು ಬೆಂಗಳೂರಿನಿಂದ ವಿಮಾನದ ಮೂಲಕ ಬಾಂಬೆಗೆ ಹಾರಿದ್ದ. ನಂತರ ಬಾಂಬೆಯಲ್ಲಿ ಕಂಪನಿ ಮೀಟಿಂಗ್ ಮುಗಿಸಿ, ಬಳಿಕ ಪ್ರೈವೇಟ್ ಜೆಟ್ ಮೂಲಕ ನೇಪಾಳದಲ್ಲಿ ತಲೆಮರಿಸಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.
ಇನ್ನು ಆರೋಪಿಯನ್ನು ಹುಡುಕಿಕೊಂಡು ಮುಂಬೈಗೆ ಹೋಗಿದ್ದ ಆರ್ ಟಿ ನಗರ ಪೊಲೀಸರು ಬರಿಗೈನಲ್ಲಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ವೇದಾಂತ್ ಕುಟುಂಬಸ್ಥರು ಮೂಲತಃ ನೇಪಳಾದವರು. ಹೀಗಾಗಿ ಪೊಲೀಸರಿಗೆ ಸಿಗಬಾರದು ಎಂದು ನೇಪಾಳಕ್ಕೆ ವೇದಾಂತ್ ಎಸ್ಕೇಪ್ ಆಗಿದ್ದಾನೆ ಎಂದು ಪೊಲೀಸರು ಮೂಲಗಳು ತಿಳಿಸಿವೆ.
ಏನಿದು ಘಟನೆ ?
ಜೂನ್ 9ರಂದು ಸಂಜೆ ಆರ್.ಟಿ.ನಗರದ ಫೋರ್ ಸೀಜನ್ ಹೋಟೆಲ್ ನಲ್ಲಿ ಸೂರ್ಯ ಎಂಬುವವರ ಮದುವೆ ಕಾರ್ಯಕ್ರಮವಿತ್ತು. ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು ವೈಷ್ಣವಿ ಬಿಲ್ಡರ್ಸ್ ಮಾಲಿಕ ಗೋವಿಂದರಾಜು ಪುತ್ರ ದರ್ಶನ್ ಹಾಗೂ ವಿಎಆರ್ ಬಿಲ್ಡರ್ಸ್ ಪುತ್ರ ಸಂಜಯ್ ದಗ್ಗರ್ ಪುತ್ರ ವೇದಾಂತ್ ದಗ್ಗರ್ ಬಂದಿದ್ದರು. ವೇದಾಂತ್ ದುಗಾರ್ ಮತ್ತು ದರ್ಶನ್ ಇಬ್ಬರು ಸ್ನೇಹಿತರು. ಕಳೆದ ಕೆಲ ದಿನದ ಹಿಂದೆ ರೆಸ್ಟೋರೆಂಟ್ ನಲ್ಲಿ ಎದುರು ಬದುರಾಗಿದ್ದರು. ಈ ವೇಳೆ ದರ್ಶನ್ ವೇದಾಂತ್ ದುಗಾರ್ ನನ್ನ ಮಾತನಾಡಿಸದೇ ಹೊರಟಿದ್ದ. ಫೋರ್ ಸೀಸನ್ ಹೋಟೆಲ್ ನಲ್ಲಿ ಸಿಕ್ಕಾಗ ಅದೇ ವಿಚಾರವಾಗಿ ಕಿರಿಕ್ ನಡೆದಿತ್ತು. ಎಲ್ಲರೂ ನನ್ನನ್ನ ಮಾತನಾಡಿಸುತ್ತಾರೆ ನೀನ್ಯಾಕೊ ಮಾತನಾಡಿಸಲ್ಲ ಎಂದು ಆಗಮ್ ದುಗಾರ್ ಪ್ರಶ್ನಿಸಿದ್ದ. ಈ ವೇಳೆ ದರ್ಶನ್ ಅದು ನನ್ನಿಷ್ಟ ಎಂದು ಎದುರುತ್ತರಿಸಿದ್ದ. ಇದರಿಂದ ಕುಪಿತಗೊಂಡ ಆಗಮ್, ಬಿಯರ್ ಬಾಟಲ್ ನಿಂದ ಹಲ್ಲೆ ನಡೆಸಿದ್ದ. ಈ ಸಂಬಂಧ ಆರ್.ಟಿ.ನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿತ್ತು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.