ಮನೆ ರಾಷ್ಟ್ರೀಯ ಪ್ರೈವೇಟ್ ಜೆಟ್ ನಲ್ಲಿ ಆರೋಪಿ ಎಸ್ಕೇಪ್: ಬರಿಗೈನಲ್ಲಿ ವಾಪಾಸ್ಸಾದ ಪೊಲೀಸರು

ಪ್ರೈವೇಟ್ ಜೆಟ್ ನಲ್ಲಿ ಆರೋಪಿ ಎಸ್ಕೇಪ್: ಬರಿಗೈನಲ್ಲಿ ವಾಪಾಸ್ಸಾದ ಪೊಲೀಸರು

0
ಸಾಂದರ್ಭಿಕ ಚಿತ್ರ

ಬೆಂಗಳೂರು:  ಕೊಲೆ ಯತ್ನ ಪ್ರಕರಣದ ಆರೋಪಿಯೊಬ್ಬ ಪೊಲೀಸರಿಂದ ತಪ್ಪಿಸಿಕೊಳ್ಳಲು ಪ್ರೈವೇಟ್ ಜೆಟ್ ಮೂಲಕ ನೆರೆ ರಾಷ್ಟ್ರಕ್ಕೆ ಎಸ್ಕೇಪ್ ಆಗಿರುವ ಅಪರೂಪದ ಘಟನೆ ವರದಿಯಾಗಿದೆ.

Join Our Whatsapp Group

ಬೆಂಗಳೂರಿನ ಆರ್​ಟಿ ನಗರ ಠಾಣಾ ವ್ಯಾಪ್ತಿಯ ಖಾಸಗಿ ಹೋಟೆಲ್​​ ನಲ್ಲಿ ನಡೆದಿದ್ದ ಉದ್ಯಮಿಗಳ ಪುತ್ರರ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಯತ್ನದ ಪ್ರಕರಣದಡಿಯಲ್ಲಿ ಪೊಲೀಸರು ಹುಡುಕುತ್ತಿದ್ದಾರೆ ಎಂದು ಗೊತ್ತಾದ ತಕ್ಷಣ ಆರೋಪಿ ಪ್ರೈವೇಟ್ ಜೆಟ್​ ಮೂಲಕ ಎಸ್ಕೇಪ್ ಆಗಿದ್ದಾನೆ. ಹೀಗಾಗಿ ಆರೋಪಿ ಬಂಧನಕ್ಕಾಗಿ ಮುಂಬೈಗೆ ತೆರಳಿದ್ದ ಆರ್​ ಟಿ ನಗರ ಪೊಲೀಸರು ಬರಿಗೈನಲ್ಲಿ ವಾಪಾಸ್ ಆಗಿದ್ದಾರೆ.

ಉದ್ಯಮಿ ವೇದಾಂತ್ ದುಗಾರ್ ಪರಾರಿಯಾದ ಆರೋಪಿ.

ಕಳೆದ ತಿಂಗಳು ಅಂದರೆ ಮೇ 9ರಂದು ವೈಷ್ಣವಿ ಬಿಲ್ಡರ್ಸ್ ಚೇರ್ಮನ್ ದರ್ಶನ್ ಮೇಲೆ ಉದ್ಯಮಿ ವೇದಾಂತ್ ದುಗಾರ್ ಹಲ್ಲೆ ನಡೆಸಿದ್ದ. ಈ ಕುರಿತು ಆರ್ ಟಿ ನಗರ ಠಾಣೆಯಲ್ಲಿ ಕೊಲೆಯತ್ನದ ಪ್ರಕರಣ ದಾಖಲಾಗಿತ್ತು. ಪೊಲೀಸರು ಈ ಪ್ರಕರಣದ ಹಿಂದೆ ಬೀಳುತ್ತಿದ್ದಂತೆಯೇ ವೇದಾಂತ್ ಮೇ 11ರಂದು ಬೆಂಗಳೂರಿನಿಂದ ವಿಮಾನದ ಮೂಲಕ ಬಾಂಬೆಗೆ ಹಾರಿದ್ದ. ನಂತರ ಬಾಂಬೆಯಲ್ಲಿ ಕಂಪನಿ ಮೀಟಿಂಗ್ ಮುಗಿಸಿ, ಬಳಿಕ ಪ್ರೈವೇಟ್ ಜೆಟ್ ಮೂಲಕ ನೇಪಾಳದಲ್ಲಿ ತಲೆಮರಿಸಿಕೊಂಡಿದ್ದಾನೆ ಎಂದು ಪೊಲೀಸ್​ ಮೂಲಗಳಿಂದ ತಿಳಿದುಬಂದಿದೆ.

ಇನ್ನು ಆರೋಪಿಯನ್ನು ಹುಡುಕಿಕೊಂಡು ಮುಂಬೈಗೆ ಹೋಗಿದ್ದ ಆರ್ ​ಟಿ ನಗರ ಪೊಲೀಸರು ಬರಿಗೈನಲ್ಲಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ವೇದಾಂತ್ ಕುಟುಂಬಸ್ಥರು ಮೂಲತಃ ನೇಪಳಾದವರು. ಹೀಗಾಗಿ ಪೊಲೀಸರಿಗೆ ಸಿಗಬಾರದು ಎಂದು ನೇಪಾಳಕ್ಕೆ ವೇದಾಂತ್ ಎಸ್ಕೇಪ್ ಆಗಿದ್ದಾನೆ ಎಂದು ಪೊಲೀಸರು ಮೂಲಗಳು ತಿಳಿಸಿವೆ.

ಏನಿದು ಘಟನೆ ?

ಜೂನ್ 9ರಂದು ಸಂಜೆ ಆರ್‌.ಟಿ.ನಗರದ ಫೋರ್‌ ಸೀಜನ್‌ ಹೋಟೆಲ್‌ ನಲ್ಲಿ ಸೂರ್ಯ ಎಂಬುವವರ ಮದುವೆ ಕಾರ್ಯಕ್ರಮವಿತ್ತು. ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು ವೈಷ್ಣವಿ ಬಿಲ್ಡರ್ಸ್ ಮಾಲಿಕ ಗೋವಿಂದರಾಜು ಪುತ್ರ ದರ್ಶನ್‌ ಹಾಗೂ ವಿಎಆರ್‌ ಬಿಲ್ಡರ್ಸ್ ಪುತ್ರ ಸಂಜಯ್‌ ದಗ್ಗರ್‌ ಪುತ್ರ ವೇದಾಂತ್‌ ದಗ್ಗರ್‌ ಬಂದಿದ್ದರು. ವೇದಾಂತ್ ದುಗಾರ್ ಮತ್ತು ದರ್ಶನ್ ಇಬ್ಬರು ಸ್ನೇಹಿತರು. ಕಳೆದ ಕೆಲ ದಿನದ ಹಿಂದೆ ರೆಸ್ಟೋರೆಂಟ್​ ನಲ್ಲಿ ಎದುರು ಬದುರಾಗಿದ್ದರು. ಈ ವೇಳೆ ದರ್ಶನ್ ವೇದಾಂತ್ ದುಗಾರ್ ​ನನ್ನ ಮಾತನಾಡಿಸದೇ ಹೊರಟಿದ್ದ. ಫೋರ್ ಸೀಸನ್ ಹೋಟೆಲ್​ ನಲ್ಲಿ ಸಿಕ್ಕಾಗ ಅದೇ ವಿಚಾರವಾಗಿ ಕಿರಿಕ್ ನಡೆದಿತ್ತು. ಎಲ್ಲರೂ ನನ್ನನ್ನ ಮಾತನಾಡಿಸುತ್ತಾರೆ ನೀನ್ಯಾಕೊ ಮಾತನಾಡಿಸಲ್ಲ ಎಂದು ಆಗಮ್ ದುಗಾರ್ ಪ್ರಶ್ನಿಸಿದ್ದ. ಈ ವೇಳೆ ದರ್ಶನ್ ಅದು ನನ್ನಿಷ್ಟ ಎಂದು ಎದುರುತ್ತರಿಸಿದ್ದ. ಇದರಿಂದ ಕುಪಿತಗೊಂಡ ಆಗಮ್, ಬಿಯರ್ ಬಾಟಲ್​ ನಿಂದ ಹಲ್ಲೆ ನಡೆಸಿದ್ದ. ಈ ಸಂಬಂಧ ಆರ್.ಟಿ.ನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿತ್ತು.

ಹಿಂದಿನ ಲೇಖನಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಗೆ 10 ವರ್ಷ ಜೈಲು, 25 ಸಾವಿರ ದಂಡ ವಿಧಿಸಿದ ನ್ಯಾಯಾಲಯ
ಮುಂದಿನ ಲೇಖನಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕಾಗಿ ಸಚಿವ ಮಧು ಬಂಗಾರಪ್ಪ ಅವರಿಗೆ ಎಸ್ ಎಫ್ ಐ ಮನವಿ