ಬೆಂಗಳೂರು: ನಕಲಿ ದಾಖಲೆಗಳನ್ನು ಸೃಷ್ಟಿಸಿ ಪತ್ನಿ ಹೆಸರಿನಲ್ಲಿ ನಿವೇಶನ ನೋಂದಣಿ ಮಾಡಿದ ಗಂಭೀರ ಆರೋಪದಡಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ನಿವೃತ್ತ ಉಪಕಾರ್ಯದರ್ಶಿ ವಿರುದ್ಧ ಶೇಷಾದ್ರಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿಡಿಎ ವಿಚಕ್ಷಣ ದಳದ ಇನ್ ಸ್ಪೆಕ್ಟರ್ ಸಂಜೀವ ರಾಯಪ್ಪ ನೀಡಿದ ದೂರಿನ ಮೇರೆಗೆ ನಿವೃತ್ತ ಉಪಕಾರ್ಯದರ್ಶಿ ಬಿ.ಟಿ.ಶಂಕರ್ ರಾಜ್ ಅರಸ್ ಹಾಗೂ ಅವರ ಪತ್ನಿ ವಿಜಯಲಕ್ಷ್ಮೀ ಅರಸ್ ವಿರುದ್ಧ ವಂಚನೆಯಡಿ ಎಫ್ ಐಆರ್ ದಾಖಲಾಗಿದೆ.
1993-94ರ ಅವಧಿಯಲ್ಲಿ ಬಿಡಿಎಯಲ್ಲಿ ಕಾರ್ಯದರ್ಶಿಯಾಗಿದ್ದ ಶಂಕರ್ ರಾಜ್, ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿದ್ದ ಮೂಲೆ ನಿವೇಶನವನ್ನು ಅಕ್ರಮವಾಗಿ ಪತ್ನಿಯ ಹೆಸರಿಗೆ ನೋಂದಣಿ ಮಾಡಿದ್ದರು. ಸಾರ್ವಜನಿಕರಿಗೆ ಹರಾಜು ಹಾಕಬೇಕಿದ್ದ ಈ ನಿವೇಶನವನ್ನು ಒಳಸಂಚು ರೂಪಿಸಿ ಅಧಿಕಾರ ದುರ್ಬಳಕೆ ಮಾಡಿಕೊಂಡು ರಿಜಿಸ್ಟರ್ ಮಾಡಿಸಿದ್ದರು. ನಕಲಿ ದಾಖಲಾತಿ ಇಟ್ಟುಕೊಂಡು, ಯಾವುದೇ ಹಣ ಪಾವತಿಸದೇ ಕಚೇರಿಯಲ್ಲಿರುವ ಸೀಲ್ ಬಳಸಿ ವಂಚಿಸಿದ್ದರು. ಇದಾಗಿ 30 ವರ್ಷಗಳ ಬಳಿಕ ಇದೀಗ ವಂಚನೆ ಬೆಳಕಿಗೆ ಬಂದಿದೆ.
ಕೆ ಸುಧಾಕರ್ ಗೆ ಗಂಡಾಂತರ.
ಕಾಂಗ್ರೆಸ್ ಕಾರ್ಯಕರ್ತರಿಗೆ ಐಟಿ ಕಿರುಕುಳ
ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆ ದ್ವಂಸ
ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.