ಮನೆ ಅಪರಾಧ ಮೀನು ವ್ಯಾಪಾರಿ ಹತ್ಯೆ ಮಾಡಿದ್ದ ಆರೋಪಿ ಮೈಸೂರಿನಲ್ಲಿ ಬಂಧನ

ಮೀನು ವ್ಯಾಪಾರಿ ಹತ್ಯೆ ಮಾಡಿದ್ದ ಆರೋಪಿ ಮೈಸೂರಿನಲ್ಲಿ ಬಂಧನ

0

ಮಡಿಕೇರಿ(Madikeri) : ಕಾರು ಹತ್ತಿಸಿ ಮೀನು ವ್ಯಾಪಾರಿಯನ್ನು ಹತ್ಯೆಗೈದು ಪರಾರಿಯಾಗಿದ್ದ ಆರೋಪಿಯನ್ನು ಮೈಸೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ನೌಷದ್ ಎಂದು ಗುರುತಿಸಲಾಗಿದೆ.

ಬಂಧಿತ ಆರೋಪಿ ಡಿ.10ರಂದು ಸಿದ್ದಾಪುರ ಪಾಲಿಬೆಟ್ಟದ ರಸ್ತೆಯಲ್ಲಿ ಮೀನು ವ್ಯಾಪಾರಿಯ ಮೇಲೆ ಕಾರು ಹತ್ತಿಸಿ ಕೊಲೆಗೈದಿದ್ದ. ಬಳಿಕ ಸ್ಥಳದಿಂದ ಕಾಲ್ಕಿತ್ತಿದ್ದ ಆರೋಪಿ, ತನ್ನ ಕಾರನ್ನು ಮೂರ್ನಾಡು ಗ್ರಾಮದ ಮುಖ್ಯ ರಸ್ತೆಯಲ್ಲಿ ನಿಲ್ಲಿಸಿ ಪರಾರಿಯಾಗಿದ್ದ.

ಘಟನೆ ಸಂಬಂಧ ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆಗಾಗಿ ಪೊಲೀಸ್ ವರಿಷ್ಠಾಧಿಕಾರಿ ಕ್ಯಾಪ್ಟನ್ ಅಯ್ಯಪ್ಪ, ಡಿವೈಎಸ್ಪಿ ಗಜೇಂದ್ರ ಪ್ರಸಾದ್ ಮಾರ್ಗದರ್ಶನದಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಶಿವಶಂಕರ್ ನೇತೃತ್ವದಲ್ಲಿ ತನಿಖಾ ತಂಡ ರಚಿಸಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಹಿಂದಿನ ಲೇಖನಅಂಧರ ಟಿ20 ವಿಶ್ವಕಪ್ ಗೆದ್ದ ಭಾರತ
ಮುಂದಿನ ಲೇಖನರಾಮನಗರ ವಿಧಾನಸಭಾ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ಕಣಕ್ಕೆ