ಮನೆ ಅಪರಾಧ ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ಆರೋಪಿ ಕಾಲಿಗೆ ಗುಂಡೇಟು

0

ನೆಲಮಂಗಲ: ಕೊಲೆ ಕೃತ್ಯದ ಆಯುಧ ಮಹಜರು ವೇಳೆ ಪೊಲೀಸರ ಮೇಲೆ ಲಾಂಗ್‌ ಬೀಸಿ ಹಲ್ಲೆಗೆ ಯತ್ನಿಸಿದ್ದ ಆರೋಪಿಗೆ ಕಾಲಿಗೆ ಪೊಲೀಸರು ಗುಂಡೇಟು ನೀಡಿದ್ದಾರೆ.

ಮಾಚೋಹಳ್ಳಿಯಲ್ಲಿ ನಡೆದಿದ್ದ ಕೊಲೆ ಪ್ರಕರಣದ ಆರೋಪಿ ರಾಜರಾಜನ್ ಅಲಿಯಾಸ್‌ ಸೇಠು ಎಂಬಾತನ ಕಾಲಿಗೆ ಮಾದನಾಯಕನಹಳ್ಳಿ ಇನ್ಸ್‌ಪೆಕ್ಟರ್ ಫೈರಿಂಗ್ ಮಾಡಿದ್ದಾರೆ. ನಂತರ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಜರಾಜನ್ ನವೆಂಬರ್ 15ರಂದು ರೌಡಿಶೀಟರ್ ನಟರಾಜ ಅಲಿಯಾಸ್‌ ಮುಳ್ಳು ಎಂಬಾತನನ್ನು ಹತ್ಯೆ ಮಾಡಿದ್ದ. ಪ್ರಕರಣ ಸಂಬಂಧ ಆರೋಪಿಯನ್ನು ಮಾದನಾಯಕನಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದರು.

ಕೃತ್ಯಕ್ಕೆ ಬಳಸಿದ ಲಾಂಗ್ ವಶಕ್ಕೆ ಪಡೆಯಲು ಪೊಲೀಸರು ಸ್ಥಳಕ್ಕೆ ತೆರಳಿದ್ದಾಗ ಪೊಲೀಸರ ಮೇಲೆ ಲಾಂಗ್ ಬೀಸಿ ಪರಾರಿಯಾಗಲು ಯತ್ನಿಸಿದ್ದಾನೆ. ಆತ್ಮರಕ್ಷಣೆಗಾಗಿ ಆತ ಕಾಲಿಗೆ ಗುಂಡು ಹಾರಿಸಿದ್ದಾಗಿ ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಹಿಂದಿನ ಲೇಖನ`ಸವಾಲ್ ಟಿವಿ’ ವರದಿ ಫಲಶ್ರುತಿ: ರಸ್ತೆ ಬದಿ ಹಾಕಿದ್ದ ಮಣ್ಣು, ಕಸ ತೆರವುಗೊಳಿಸಿದ ಪಾಲಿಕೆ
ಮುಂದಿನ ಲೇಖನಬೆಳಗಾವಿ ಗಡಿ ವಿವಾದ: ಮುಂದಿನ ವಾರ ಸರ್ವಪಕ್ಷ ಸಭೆ