ಮನೆ ಅಪರಾಧ ವ್ಯಕ್ತಿಯನ್ನು ತುಂಡು ತುಂಡಾಗಿ ಕತ್ತರಿಸಿ ಹತ್ಯೆ ಮಾಡಿ ಮೋರಿಗೆ ಎಸೆದ ಆರೋಪಿ

ವ್ಯಕ್ತಿಯನ್ನು ತುಂಡು ತುಂಡಾಗಿ ಕತ್ತರಿಸಿ ಹತ್ಯೆ ಮಾಡಿ ಮೋರಿಗೆ ಎಸೆದ ಆರೋಪಿ

0

ಬೆಂಗಳೂರು:  ವ್ಯಕ್ತಿಯೊಬ್ಬರನ್ನು ಆರೋಪಿ ಮನೆಯಲ್ಲೇ ತುಂಡುತುಂಡಾಗಿ ಕತ್ತರಿಸಿ ಹತ್ಯೆ ಮಾಡಿದ್ದಲ್ಲದೆ, ಮೃತದೇಹದ ಭಾಗಗಳನ್ನು ಬೇರೆ ಬೇರೆ ಮೋರಿಗೆ ಎಸೆದು ಸಾಕ್ಷ್ಯ ನಾಶ ಮಾಡಲಾಗಿದೆ.

Join Our Whatsapp Group

ಮೃತದೇಹದ ಪತ್ತೆಗೆ ನುರಿತ ತಜ್ಞರನ್ನು ಕರೆಸಿಕೊಂಡರೂ ಉಪಯೋಗವಾಗಿಲ್ಲ. ಮೂರು ದಿನಗಳಿಂದ ಹುಡುಕಿದರೂ ಮೃತದೇಹ ಇನ್ನೂ ಪತ್ತೆಯಾಗಿಲ್ಲ. ಬೆಂಗಳೂರಿನ ರಾಮಮೂರ್ತಿನಗರ ಪೊಲೀಸ್ ಠಾಣಾ  ವ್ಯಾಪ್ತಿಯಲ್ಲಿ ಈ ಕೃತ್ಯ ಎಸಗಲಾಗಿದೆ.

ಕೊಲೆಯಾದ ದುರ್ದೈವಿ ಕೆವಿ ಶ್ರೀಕಾಂತ್ (34) ಎಂಬುದು ತಿಳಿದುಬಂದಿದೆ. ಮಾಧವ ರಾವ್ ಎಂಬಾತನೇ ಕೊಲೆ ಆರೋಪಿಯಾಗಿದ್ದು, ಸಂಪಿಗೆಹಳ್ಳಿ ಪೊಲೀಸರು ಭಯಾನಕ ಕೊಲೆಯ ಕೃತ್ಯವನ್ನು ಬಯಲಿಗೆಳೆದಿದ್ದಾರೆ.

ಬಸವೇಶ್ವರನಗರದಲ್ಲಿರುವ ಮಾರ್ಗದರ್ಶಿ ಚೀಟ್ ಫಂಡ್​​ನಲ್ಲಿ ಡೆವಲಪ್ಮೆಂಟ್ ಆಫೀಸರ್ ಆಗಿದ್ದ ಶ್ರೀಕಾಂತ್, ಥಣಿಸಂದ್ರದ ಅಂಜನಾದ್ರಿ ಲೇಔಟ್​​ನಲ್ಲಿ ವಾಸವಿದ್ದರು. ಮೇ 28ರ ಬೆಳಗ್ಗೆ ಮನೆಯಿಂದ ಹೊರಹೋಗಿದ್ದ ಶ್ರೀಕಾಂತ್ ಮನೆಗೆ ವಾಪಸ್ ಆಗಿಲ್ಲ. ಶ್ರೀಕಾಂತ್ ನಾಪತ್ತೆ ಬಗ್ಗೆ ಮೇ 29ರಂದು ಸಂಪಿಗೆಹಳ್ಳಿ ಪೊಲೀಸ್ ಠಾಣೆಗೆ ಅವರ ಪತ್ನಿ ದೂರು ನೀಡಿದ್ದರು. ಈ ಪ್ರಕರಣದ ಬಗ್ಗೆ ತನಿಖೆ ನಡೆಸಿದ ಪೊಲೀಸರಿಗೆ ಶ್ರೀಕಾಂತ್ ಮೇ 28ರಂದು ಮಾಧವರಾವ್ ಮನೆಗೆ ಹೋಗಿರುವುದು ಪತ್ತೆಯಾಗಿತ್ತು. ಕೆಆರ್ ಪುರಂನ ವಿಜಿನಪುರದಲ್ಲಿರುವ ಮಾಧವ ರಾವ್ ಮನೆಗೆ ಹೋಗಿರುವುದು ತಿಳಿದುಬಂದಿತ್ತು. ಮನೆಯ ಸಿಸಿಟಿವಿಯಲ್ಲಿ ಮಾಧವ ರಾವ್ ಮನೆಗೆ ಶ್ರೀಕಾಂತ್ ಪ್ರವೇಶಿಸಿರುವ ದೃಶ್ಯ ಸಿಕ್ಕಿತ್ತು. ಆದರೆ ಶ್ರೀಕಾಂತ್ ಮನೆಯಿಂದ ಹೊರಗೆ ಹೋಗುವುದು ರೆಕಾರ್ಡ್ ಆಗಿರಲಿಲ್ಲ. ಹೀಗಾಗಿ ಜೊತೆಗೆ ಮನೆಯ ಒಳಗಡೆ ಪರಿಶೀಲನೆ ಮಾಡಿದಾಗ ರಕ್ತದ ಕಲೆಗಳು ಪತ್ತೆಯಾಗಿದ್ದವು. ಬಳಿಕ ಮಾಧವ ರಾವ್ ಬಗ್ಗೆ ವಿಚಾರಿಸಿದಾಗ ಆತನೂ ನಾಪತ್ತೆಯಾಗಿರುವುದು ಗೊತ್ತಾಗಿತ್ತು.

ಬಳಿಕ ಆಂಧ್ರ ಪ್ರದೇಶದಲ್ಲಿ ಮಾಧವ ರಾವ್ ಪತ್ತೆ ಮಾಡಿ ಪೊಲೀಸರು ಕರೆತಂದಿದ್ದರು. ಪೊಲೀಸರ ವಿಚಾರಣೆ ವೇಳೆ ಮಾಧವ ರಾವ್ ಬಾಯ್ಬಿಟ್ಟಿದ್ದು, ನಡೆದ ವಿಚಾರ ತಿಳಿಸಿದ್ದಾನೆ.

ಮಾಧವ ರಾವ್ ಮತ್ತು ಶ್ರೀಕಾಂತ್​ಗೆ ಎರಡು ವರ್ಷಗಳಿಂದ ಪರಿಚಯ ಇತ್ತು. ಶ್ರೀಕಾಂತ್ ಬಳಿ ಮಾಧವರಾವ್ 5 ಲಕ್ಷ ರೂ. ಹಣದ ಚೀಟಿ ಹಾಕಿದ್ದ. ಈ ಚೀಟಿ ಹಣದ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ನಡೆಯುತ್ತಿತ್ತು. ಚೀಟಿ ಹಣ ವಾಪಸ್ ಕೊಡುವಂತೆ ಮಾಧವ ರಾವ್ ಒತ್ತಾಯ ಮಾಡುತ್ತಿದ್ದ. ಇಷ್ಟೇ ಅಲ್ಲದೆ, ಮಾಧವ ರಾವ್ ಪತ್ನಿ ಜೊತೆ ಶ್ರೀಕಾಂತ್​​ಗೆ ಅಕ್ರಮ ಸಂಬಂಧ ಇತ್ತು ಎಂಬ ಆರೋಪಗಳೂ ಇವೆ.

ಮೇ 28ರಂದು ಬೆಳಗ್ಗೆ ಮಾಧವ ರಾವ್ ಮನೆಗೆ ಶ್ರೀಕಾಂತ್ ತೆರಳಿದ್ದ. ಈ ವೇಳೆ ಮನೆಯಲ್ಲಿ ಇಬ್ಬರಿಗೂ ಹಣದ ವಿಚಾರಕ್ಕೆ ಗಲಾಟೆ ಆಗಿದೆ. ಬಳಿಕ ಮಾಧವ ರಾವ್ ಮನೆಯಲ್ಲಿದ್ದ ಜಾಕ್, ರಾಡ್​​ನಿಂದ ಶ್ರೀನಾಥ್ ತಲೆಗೆ ಹೊಡೆದಿದ್ದ. ಕುಸಿದು ಬಿದ್ದ ಶ್ರೀಕಾಂತ್ ದೇಹವನ್ನು ಮಚ್ಚಿನಿಂದ ತುಂಡು ತುಂಡಾಗಿ ಕತ್ತರಿಸಿದ್ದ. ಸಾಕ್ಷಿ ನಾಶ ಮಾಡಲು ಶ್ರೀಕಾಂತ್ ಮೃತದೇಹವನ್ನು ಮೂರು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿದ್ದ. ಬಳಿಕ ಮೊದಲಿಗೆ ಒಂದು ಬ್ಯಾಗ್, ನಂತರ ಎರಡು ಬ್ಯಾಗ್​​ಗಳಲ್ಲಿ ಮೃತದೇಹದ ತುಂಡುಗಳನ್ನು ಬೆಳತ್ತೂರು ಬಳಿಯ ಮೋರಿಯಲ್ಲಿ (ಪಿನಾಕಿನಿ ನದಿ) ಹಾಕಿದ್ದ. ನಂತರ ತನ್ನ ಮೊಬೈಲ್ ಸ್ವಿಚ್ಡ್ ಆಫ್ ಮಾಡಿ ಶ್ರೀಕಾಂತ್ ಆಂಧ್ರ ಪ್ರದೇಶಕ್ಕೆ ಪರಾರಿಯಾಗಿದ್ದ.

ಸದ್ಯ ಪ್ರಕರಣ ರಾಮಮೂರ್ತಿನಗರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದೆ. ಕೊಲೆ ಮಾಡಿದ ಸ್ಥಳ‌ ರಾಮಮೂರ್ತಿ ನಗರ ಠಾಣಾ ವ್ಯಾಪ್ತಿಗೆ ಬರುವ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ. ರಾಮಮೂರ್ತಿನಗರ ಪೊಲೀಸರಿಂದ ಕೊಲೆ (302) ಮತ್ತು ಸಾಕ್ಷಿ ನಾಶ (201)ರಡಿ ಕೇಸ್ ದಾಖಲಾಗಿದೆ.

ಹಿಂದಿನ ಲೇಖನರೌಡಿ ಚೈಲ್ಡ್ ರವಿ ಹತ್ಯೆ ಪ್ರಕರಣ: ನಾಲ್ವರ ಬಂಧನ
ಮುಂದಿನ ಲೇಖನಬಿಜೆಪಿ ನಾಯಕರು ಹೇಳಿದ್ದಾರೆಂದು ಶರಣಪ್ರಕಾಶ್ ಪಾಟೀಲ್ ದೋಷಿಯಾಗಲ್ಲ: ಜಿ ಪರಮೇಶ್ವರ್