ಮೈಸೂರು: ಚುನಾವಣಾ ಪ್ರಕ್ರಿಯೆಯಲ್ಲಿ ಸೆಕ್ಟರ್ ಆಫೀಸರ್ ಗಳ ಕೆಲಸ ಪ್ರಮುಖವಾಗಿದ್ದು ಅವರ ಕರ್ತವ್ಯ ಮತ್ತು ಜವಾಬ್ದಾರಿಯನ್ನು ಅರಿತು ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಚುನಾವಣಾ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ತಿಳಿಸಿದರು.
ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023 ರ ಸಂಬoಧ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ನಂಜನಗೂಡು ಕ್ಷೇತ್ರ ಮತ್ತು ವರುಣಾ ಕ್ಷೇತ್ರಗಳ ಫ್ಲೈಯಿಂಗ್ ಸ್ಕ್ವಾಡ್ ಹಾಗೂ ಸ್ಟಾಟಿಸ್ಟಿಕ್ ಸರ್ವೇಲೆನ್ಸ್ ತಂಡದ ಸದಸ್ಯರುಗಳು ನಿರ್ವಹಿಸಬೇಕಾದ ಕರ್ತವ್ಯಗಳು ಮತ್ತು ಜವಾಬ್ದಾರಿಗಳ ಕುರಿತು ಮಾದರಿ ನೀತಿ ಸಂಹಿತೆ ಸಮಿತಿಯ ವತಿಯಿಂದ ನಂಜನಗೂಡಿನ ರಿಟರ್ನಿಂಗ್ ಆಫೀಸರ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ತರಬೇತಿಯನ್ನು ಉದ್ಘಾಟಿಸಿ ಮಾತನಾಡಿದರು.
ಸೆಕ್ಟರ್ ಅಧಿಕಾರಿಗಳು ಬೂತ್ ಲೆವೆಲ್ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು ಏನಾದರೂ ಸಮಸ್ಯೆಗಳು ಕಂಡು ಬಂದಲ್ಲಿ ಪರಿಹರಿಸಬೇಕು. ಮತದಾರರ ಪಟ್ಟಿಯಲ್ಲಿ ಹೆಸರು ಬಿಟ್ಟು ಹೋಗಿದ್ದರೆ ಮತ್ತು ಮತದಾರರ ಪಟ್ಟಿಯಲ್ಲಿ ಹೊಸದಾಗಿ ಹೆಸರು ಸೇರಿಸಲು ಏಪ್ರಿಲ್ 11ರವರೆಗೆ ಅವಕಾಶವಿದ್ದು, ತಡ ಮಾಡದೆ ಬಂದ ಅರ್ಜಿಗಳನ್ನು ಸ್ವೀಕರಿಸಿ ಈ ಕೆಲಸಗಳನ್ನು ಪೂರ್ಣಗೊಳಿಸಬೇಕು ಎಂದು ತಿಳಿಸಿದರು.
ಮತದಾರರ ಪಟ್ಟಿಯಿಂದ ಹೆಸರುಗಳು ಕೈ ಬಿಟ್ಟು ಹೋಗದಂತೆ ಮತ್ತು ಮರಣ ಹೊಂದಿದವರ ಪಟ್ಟಿಯ ಬಗ್ಗೆ ಗಮನಹರಿಸಬೇಕು. 80 ವರ್ಷ ಮೇಲ್ಪಟ್ಟಿದ್ದು ಮತಗಟ್ಟೆಗೆ ಬಂದು ಮತ ಹಾಕಲು ಸಾಧ್ಯವಾಗದವರಿಗೆ 12 ಡಿ ಮೂಲಕ ಮತದಾನ ಮಾಡಲು ಅವಕಾಶವಿದೆ. ಸಿ-ವಿಜಿಲ್ ಮೂಲಕ ದಾಖಲಾದ ದೂರುಗಳಿಗೆ ನೂರು ನಿಮಿಷಗಳಲ್ಲಿ ಪರಿಹಾರಕ್ಕೆ ನಮ್ಮ ಕೈಗೊಳ್ಳಲಾಗುವುದು. ವಲ್ನರಬಲ್ ಹಾಗೂ ಕ್ರಿಟಿಕಲ್ ಪೋಲಿಂಗ್ ಸ್ಟೇಷನ್ ಗಳನ್ನು ಗುರುತಿಸಿದ್ದು, ಅವುಗಳ ಸರಿಯಾದ ನಿರ್ವಹಣೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಗಮನಹರಿಸಬೇಕು ಎಂದು ತಿಳಿಸಿದರು.
ಮತಗಟ್ಟೆಯಲ್ಲಿ ಕುಡಿಯುವ ನೀರು, ಶೌಚಾಲಯ, ವಿದ್ಯುತ್,ರ್ಯಾಂಪ್ ಫ್ಯಾನ್ ಒಳಗೊಂಡಂತೆ ಕನಿಷ್ಠ ಸೌಲಭ್ಯಗಳಿರುವಂತೆ ನೋಡಿಕೊಳ್ಳಬೇಕು. ಇವಿಎಂ ಮತ್ತು ವಿವಿಪ್ಯಾಟ್ ಗಳ ನಿರ್ವಹಣೆಯಲ್ಲಿ ಅಥವಾ ಇವುಗಳ ಬಳಕೆಯಲ್ಲಿ ಸಮಸ್ಯೆಯಾದರೆ ರಿಪ್ಲೇಸ್ ಮಾಡಿಕೊಡಲಾಗುವುದು.
ಎಫ್ ಎಸ್ ಟಿ ಮತ್ತು ಎಸ್ ಎಸ್ ಟಿ ತಂಡದವರಿಗೆ ವಾಹನ ಪೂರೈಕೆ ಮಾಡಲು ಆರ್ ಓ ಹಾಗೂ ಎಆರ್ ಓ ಗಳಿಗೆ ಸೂಚಿಸಿದರು.
ತರಬೇತಿಯಲ್ಲಿ ಜಿಲ್ಲಾ ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಕೆ.ಎಂ ಗಾಯತ್ರಿ, ಪ್ರಾಚ್ಯ ವಸ್ತು ಸಂಗ್ರಹಾಲಯದ ಆಯುಕ್ತರಾದ ಶ್ರೀ ದೇವರಾಜ್ ಅವರನ್ನು ಒಳಗೊಂಡಂತೆ ಇತರರು ಉಪಸ್ಥಿತರಿದ್ದರು.
ಶಾಲೆಗೆ ಕುಡಿದು ಬರುತ್ತಿದ್ದ ಶಿಕ್ಷಕ ; ಚಪ್ಪಲಿ – ಶೂ ಎಸೆದು ಓಡಿಸಿದ ವಿದ್ಯಾರ್ಥಿಗಳು
ಮತದಾರರಿಗೆ ' ಸಿಹಿ ', ಸುದ್ದಿ..
ಮೋದಿ ಅಭಿಮಾನಿಯ ಕೋರಿಕೆ…
ಪ್ರಸ್ತುತ ಪೊಲೀಸ್ ವ್ಯವಸ್ಥೆಯನ್ನು ಅಣುಕಿಸುತ್ತಿರುವ ಕಾಲ್ಪನಿಕ ಸನ್ನಿವೇಶಗಳು..
ಅಭಿಮಾನಿ ದೇವರುಗಳ ಜೊತೆ ಜಾಕಿ ಚಲನಚಿತ್ರ ವೀಕ್ಷಿಸಿದ ಅಶ್ವಿನಿ ಪುನೀತ್
ಮೈಸೂರು ಮೆಡಿಕಲ್ ಕಾಲೇಜು ಮತ್ತು ಕೆ ಆರ್ ಆಸ್ಪತ್ರೆಯ ಕರ್ಮಕಾಂಡ
ಕರ್ನಾಟಕದ ಹೆಮ್ಮೆಯ ರತ್ನ ಶ್ರೀಮತಿ ಸುಧಾಮೂರ್ತಿಯವರು ರಾಜ್ಯಸಭಾ ಸದಸ್ಯೆಯಾಗಿ ಪ್ರಮಾಣ ವಚನ ಸ್ವೀಕರಿಸಿದರು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.