ಮನೆ ರಾಜಕೀಯ ಪಾರಂಪರಿಕ ಕಟ್ಟಡಗಳ ರಕ್ಷಣೆಗೆ ಕ್ರಮ: ಎಸ್.ಟಿ.ಸೋಮಶೇಖರ್ ಭರವಸೆ

ಪಾರಂಪರಿಕ ಕಟ್ಟಡಗಳ ರಕ್ಷಣೆಗೆ ಕ್ರಮ: ಎಸ್.ಟಿ.ಸೋಮಶೇಖರ್ ಭರವಸೆ

0

ಮೈಸೂರು(Mysuru): ನಗರದಲ್ಲಿರುವ ‍ಪಾರಂಪರಿಕ ಕಟ್ಟಡಗಳ ರಕ್ಷಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್‌ ಭರವಸೆ ನೀಡಿದರು.

ಮಹಾರಾಣಿ ವಿಜ್ಞಾನ ಕಾಲೇಜು ಕಟ್ಟಡ ಕುಸಿದ ಬಗ್ಗೆ ಶನಿವಾರ ಪ್ರತಿಕ್ರಿಯಿಸಿದ ಅವರು, ಈ ವರ್ಷ ನಿರೀಕ್ಷೆಗೂ ಮೀರಿ ಮಳೆ ಸುರಿಯುತ್ತಿದೆ. ಇದರಿಂದಾಗಿ ಹಲವು ಕಡೆ ಹಾನಿ ಆಗುತ್ತಿರುವುದು ಗಮನಕ್ಕೆ ಬಂದಿದೆ. ಎಲ್ಲೆಲ್ಲಿ ಸಮಸ್ಯೆಯಾಗಿದೆ ಎಂಬುದರ ಮಾಹಿತಿ ಪಡೆದು ಪರಿಹರಿಸಲಾಗುವುದು. ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದರು.

ದಸರಾ ಮಹೋತ್ಸವದ ಖರ್ಚು–ವೆಚ್ಚಗಳನ್ನು ಲೆಕ್ಕವನ್ನು ಶೀಘ್ರದಲ್ಲೇ ಕೊಡುತ್ತೇನೆ. 19 ಉಪ‌ ಸಮಿತಿಯವರು ಲೆಕ್ಕ ಕೊಟ್ಟಿದ್ದಾರೆ. ಇನ್ನೆರಡು ಉಪ ಸಮಿತಿಯವರು ಕೊಡಬೇಕಿದೆ. ಎಲ್ಲ ಮಾಹಿತಿಯೂ ಲಭ್ಯವಾಗುತ್ತಿದ್ದಂತೆಯೇ ಮಾಧ್ಯಮದ ಮೂಲಕ ಸಾರ್ವಜನಿಕರ ಗಮನಕ್ಕೆ ತರಲಾಗುವುದು ಎಂದು ಹೇಳಿದರು.

ಹಿಂದಿನ ಲೇಖನಸರ್ಕಾರಿ ಶಾಲೆಗಳಲ್ಲಿ ದೇಣಿಗೆ ಸಂಗ್ರಹ:  ನನ್ನದಾಗಲಿ, ಮುಖ್ಯಮಂತ್ರಿಯದ್ದಾಗಲಿ ಪಾತ್ರವಿಲ್ಲ ಎಂದ ಬಿ.ಸಿ.ನಾಗೇಶ್
ಮುಂದಿನ ಲೇಖನಅರುಣಾಚಲ ಪ್ರದೇಶದಲ್ಲಿ ಹೆಲಿಕಾಪ್ಟರ್ ಪತನ: ಕಾಸರಗೋಡು ಮೂಲದ ಸೈನಿಕ ಬಲಿ