ಮನೆ ರಾಜ್ಯ ಎಂ ಪಿ ಕುಮಾರಸ್ವಾಮಿ ವಿರುದ್ಧ ಕಾರ್ಯಕರ್ತರ ಆಕ್ರೋಶ: ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಮೊಟಕು

ಎಂ ಪಿ ಕುಮಾರಸ್ವಾಮಿ ವಿರುದ್ಧ ಕಾರ್ಯಕರ್ತರ ಆಕ್ರೋಶ: ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಮೊಟಕು

0

ಚಿಕ್ಕಮಗಳೂರು: ಮೂಡಿಗೆರೆಯಲ್ಲಿ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ವಿರುದ್ಧ ಕಾರ್ಯಕರ್ತರ ಆಕ್ರೋಶ ಬಹಿರಂಗವಾಗಿದ್ದು ಗುರುವಾರ ನೂರಾರು ಕಾರ್ಯಕರ್ತರು ನಡು ರಸ್ತೆಯಲ್ಲೇ ಪ್ರತಿಭಟನೆ ನಡೆಸಿದ್ದು, ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಮೊಟಕುಗೊಂಡಿದೆ.

ಬಿ.ಎಸ್‌.ಯಡಿಯೂರಪ್ಪ ಅವರು ಶೃಂಗೇರಿಯಲ್ಲಿ ಯಾತ್ರೆ ಮುಗಿಸಿ ಮಧ್ಯಾಹ್ನ 1.45ರ ಸಮಯಕ್ಕೆ ಮೂಡಿಗೆರೆಗೆ ತಲುಪಿದರು.

ಅಯ್ಯಪ್ಪ ಸ್ವಾಮಿ ದೇಗುಲದಿಂದ ರೋಡ್‌ ಷೋ ಆರಂಭವಾಗಬೇಕಿತ್ತು. ಯಾತ್ರೆ ನಿಮಿತ್ತ ಬಹಳಷ್ಟು ಕಾರ್ಯಕರ್ತರು, ಮುಖಂಡರ ಪಟ್ಟಣದಲ್ಲಿ ಜಮಾಯಿಸಿದ್ದರು.

‘ಎಂ.ಪಿ.ಕುಮಾರಸ್ವಾಮಿ ಬೇಡ, ಬಿಜೆಪಿ ಬೇಕು..’ ಎಂದು ಹಲವರು ಘೋಷಣೆ ಕೂಗಿ, ಫಲಕಗಳನ್ನು ಪ್ರದರ್ಶಿಸಿದರು. ಇನ್ನು ಹಲವರು ‘ಬೇಕೇ ಬೇಕು ಕುಮಾರಸ್ವಾಮಿ ಬೇಕು’ ಎಂದು ಘೋಷಣೆಗಳನ್ನು ಕೂಗಿದರು.

ತಳ್ಳಾಟ, ನೂಕಾಟ ನಡೆಯಿತು. ನೂಕು ನುಗ್ಗಲು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಜಿಲ್ಲಾ ಘಟಕದ ಅಧ್ಯಕ್ಷ ಎಚ್‌.ಸಿ.ಕಲ್ಮರುಡಪ್ಪ, ಎಂ.ಕೆ.ಪ್ರಾಣೇಶ್‌ ಮೊದಲಾದವರು ಇದ್ದರು. ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಯಡಿಯೂರಪ್ಪ ಅವರು ಕಾರು ಇಳಿಯಲಿಲ್ಲ. ಅವರು ಮೂಡಿಗೆರೆಯಿಂದ ಚಿಕ್ಕಮಗಳೂರಿಗೆ ತೆರಳಿದರು.

ಕುಮಾರಸ್ವಾಮಿ ವಿರೋಧಿ ಬಣದವರು ಮೂಡಿಗೆರೆಯ ಪ್ರೀತಂ ಸಭಾಂಗಣದಲ್ಲಿ ಬೆಳಿಗ್ಗೆ ಸಭೆ ನಡೆಸಿ ಕುರಿತು ಅಭಿಪ್ರಾಯ ಸಂಗ್ರಹಿಸಿದ್ದರು. ಯಾತ್ರೆಯಲ್ಲಿ ಪಾಲ್ಗೊಳ್ಳುವ ನಾಯಕರಿಗೆ ನಿಲುವು ತಿಳಿಸಲು ನಿರ್ಧರಿಸಿದ್ದರು.

ಹಿಂದಿನ ಲೇಖನಅಪ್ಪು ಜನ್ಮದಿನದಂದು ವಿಶ್ವಸಂಸ್ಥೆಯಲ್ಲಿ ‘ಕಾಂತಾರ’ ಸಿನಿಮಾ ಪ್ರದರ್ಶನ
ಮುಂದಿನ ಲೇಖನಐಸಿಸಿ ಟೆಸ್ಟ್ ಬೌಲರ್‌’ಗಳ ರ‍್ಯಾಂಕಿಂಗ್‌’ನಲ್ಲಿ ಅಗ್ರಸ್ಥಾನಕ್ಕೆ ಮರಳಿದ ಆರ್‌. ಅಶ್ವಿನ್