ಮನೆ ಮನರಂಜನೆ ನಟ ಪುನೀತ್ ರಾಜ್ ಕುಮಾರ್ ಪುಣ್ಯ ಸ್ಮರಣೆ: ಸಿಎಂ ಸೇರಿದಂತೆ ಅಭಿಮಾನಿಗಳಿಂದ ಗೌರವ ನಮನ

ನಟ ಪುನೀತ್ ರಾಜ್ ಕುಮಾರ್ ಪುಣ್ಯ ಸ್ಮರಣೆ: ಸಿಎಂ ಸೇರಿದಂತೆ ಅಭಿಮಾನಿಗಳಿಂದ ಗೌರವ ನಮನ

0

ಬೆಂಗಳೂರು(Bengaluru): ನಟ, ದಿವಂಗತ ಪುನೀತ್ ರಾಜ್‌ಕುಮಾರ್‌ ಅವರ ಮೊದಲ ವರ್ಷದ ಪುಣ್ಯತಿಥಿ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರು ಗೌರವ ಸಲ್ಲಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿ, ‘ಬಾಲನಟನಾಗಿ ಚಿತ್ರರಂಗ ಪ್ರವೇಶಿಸಿ, ಪವರ್ ಸ್ಟಾರ್ ಆಗಿ ಕನ್ನಡಿಗರ ಜನಮಾನಸದಲ್ಲಿ ಶಾಶ್ವತ ಸ್ಥಾನ ಪಡೆದಿರುವ ಪ್ರೀತಿಯ ‘ಅಪ್ಪು’, ಡಾ. ಪುನೀತ್ ರಾಜ್‌ಕುಮಾರ್ ಅವರ ಪುಣ್ಯಸ್ಮರಣೆಯಂದು ಅವರಿಗೆ ಪ್ರೀತಿ ಪೂರ್ವಕ ನಮನಗಳು. ಅತಿ ಚಿಕ್ಕ ವಯಸ್ಸಿನಲ್ಲಿ ಅವರು ಮಾಡಿದ ಸಾಧನೆ, ಗಳಿಸಿದ ಜನಪ್ರಿಯತೆ, ಕೈಗೊಂಡ ಜನಸೇವೆಯನ್ನು ವರ್ಣಿಸಲು ಪದಗಳೇ ಸಾಲದು’ ಎಂದಿದ್ದಾರೆ.

ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು, ‘ಜನಮಾನಸದಲ್ಲಿ ಚಿರಸ್ಥಾಯಿ ಆಗಿರುವ ನೆಚ್ಚಿನ ಕಲಾವಿದ, ನಮ್ಮೆಲ್ಲರ ಪ್ರೀತಿಯ ‘ಅಪ್ಪು’, ಪುನೀತ್ ರಾಜಕುಮಾರ್ ಅವರ ಪ್ರಥಮ ಪುಣ್ಯತಿಥಿಯಂದು ಅವರಿಗೆ ಭಾವಪೂರ್ಣ ನಮನಗಳು. ಅವರ ಕಲಾವಂತಿಕೆ, ಹೃದಯವಂತಿಕೆಯ ವ್ಯಕ್ತಿತ್ವ ಎಂದೆಂದಿಗೂ ಅಜರಾಮರ’ ಎಂದು ಟ್ವೀಟ್ ಮಾಡಿದ್ದಾರೆ.

‘ಒಳ್ಳೆಯದನ್ನು ಬಯಸುವವರ ಮನಸ್ಸು, ಹೃದಯದಲ್ಲಿ ‘ಅಪ್ಪು’ ಇನ್ನೂ ಬದುಕಿದ್ದಾರೆ. ತಮ್ಮ ಕನಸಿನ ಗಂಧದಗುಡಿಯ ಮೂಲಕ ಅವರು ಪರಿಸರದಲ್ಲಿ ಲೀನವಾಗಿದ್ದಾರೆ. ನಿಮ್ಮನು ಪಡೆದ ನಾವು ನಿಜಕ್ಕೂ ಪುನೀತ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ಪುನೀತ್ ಅಭಿಮಾನಿಗಳು ಗೌರವ ಸಲ್ಲಿಸಿದ್ದಾರೆ.

ನಟ ಪುನೀತ್‌ ರಾಜ್‌ಕುಮಾರ್‌ ಹೆಜ್ಜೆಹಾಕಿರುವ ಡಾಕ್ಯೂಫಿಲಂ ‘ಗಂಧದಗುಡಿ’ ಶುಕ್ರವಾರ ರಾಜ್ಯದಾದ್ಯಂತ 200ಕ್ಕೂ ಅಧಿಕ ಪರದೆಗಳಲ್ಲಿ ತೆರೆಕಂಡಿದೆ. ಅಮೋಘವರ್ಷ ನಿರ್ದೇಶನ, ಪಿಆರ್‌ಕೆ ಪ್ರೊಡಕ್ಷನ್ಸ್‌ನಡಿ ನಿರ್ಮಾಣಗೊಂಡಿರುವ ಈ ಚಿತ್ರಕ್ಕೆ ಪ್ರೇಕ್ಷರಿಂದ ಮೆಚ್ಚುಗೆ ವ್ಯಕ್ತವಾಗಿದೆ.

https://twitter.com/Nagu_nayak07/status/1586213626817687553?s=20&t=QgEZ7OQXRpZvbmbOe-TFmw

2021ರ ಅಕ್ಟೋಬರ್ 29ರಂದು ಅಪ್ಪು ನಿಧನರಾದರು. ಈ ಕಾರಣಕ್ಕೆ ‘ಗಂಧದಗುಡಿ’ ಸಾಕ್ಷ್ಯಚಿತ್ರವನ್ನು ಅಕ್ಟೋಬರ್ 28ರಂದು ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿತ್ತು.

ಹಿಂದಿನ ಲೇಖನಮೈಸೂರು ಸಕ್ಕರೆ ಕಾರ್ಖಾನೆ ಪುನಶ್ಚೇತಕ್ಕಾಗಿ 20 ಕೋಟಿ ನೀಡಿ: ಸಿಎಂಗೆ ದಿನೇಶ್ ಗೂಳಿಗೌಡ ಮನವಿ
ಮುಂದಿನ ಲೇಖನಚಾಮರಾಜನಗರ: ಎಸ್’ಎಸ್’ಎಲ್’ಸಿ ವಿದ್ಯಾರ್ಥಿನಿ ಮೇಲೆ ನೆರೆಮನೆಯವನಿಂದಲೇ ಅತ್ಯಾಚಾರ – ಆರೋಪಿ ಬಂಧನ